alex Certify BIG NEWS: ದೈವ ನರ್ತನ ಮಾಡುವವರಿಗೆ ಮಾಸಾಶನ ಘೋಷಣೆ: ಸಚಿವ ಸುನೀಲ್ ಕುಮಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೈವ ನರ್ತನ ಮಾಡುವವರಿಗೆ ಮಾಸಾಶನ ಘೋಷಣೆ: ಸಚಿವ ಸುನೀಲ್ ಕುಮಾರ್ ಮಾಹಿತಿ

ಬೆಂಗಳೂರು: ಕನ್ನಡದ ಕಾಂತಾರಾ ಚಿತ್ರದ ಜನಪ್ರಿಯತೆ ನಡುವೆಯೇ ಇದೀಗ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೈವ ನರ್ತನ ಮಾಡುವ 60 ವರ್ಷ ಮೇಲ್ಪಟ್ಟವರಿಗೆ ಮಾಸಾಶನ ನೀಡಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಮಾಸಾಶನ ನೀಡಲಾಗುವುದು ಎಂದರು.

ಇದೇ ವೇಳೆ ಕಾಂತಾರಾ ಚಿತ್ರದ ಬಗ್ಗೆ ನಟ ಚೇತನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಸಂಸ್ಕೃತಿ ಇಲ್ಲದವರು ಸಂಸ್ಕೃತಿ ಬಗ್ಗೆ ಮಾತನಾಡಬಾರದು. ದೈವ ನರ್ತನ ಹಿಂದೂ ಸಂಸ್ಕೃತಿ ಒಂದು ಭಾಗ. ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...