alex Certify BIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ

ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ತಡರಾತ್ರಿಯಿಂದ ತಮಿಳುನಾಡಿದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಮಳೆ ಹಿನ್ನೆಲೆಯಲ್ಲಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಚೆಂಗಲ್ ಪೇಟ್ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಚೆನ್ನೈಗೆ ಆಗಮಿಸುತ್ತಿದ್ದ ಅಂತರಾಷ್ಟ್ರೀಯ ವಿಮಾನದಲ್ಲಿ ವ್ಯತ್ಯವವಾಗಿದೆ. ಚೆನ್ನೈಗೆ ತೆರಳಬೇಕಿದ್ದ ಅಂತರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಇನ್ನು ಚೆನ್ನೈನಿಂದ ಹೊರಡಬೇಕಿದ್ದ 12 ಅಂತರಾಷ್ಟ್ರೀಯ ವಿಮಾನಗಳು ವಿಳಂಬವಾಗಿ ಹೊರಡುತ್ತಿವೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...