alex Certify BIG NEWS: ಧಾರ್ಮಿಕ ವಿಭಜನೆ ಬಿಕ್ಕಟ್ಟು ತಡೆಯಿರಿ; ಮುಖ್ಯಮಂತ್ರಿಗಳಿಗೆ ಕಿರಣ್ ಮಜುಂಮ್ದಾರ್ ಷಾ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರ್ಮಿಕ ವಿಭಜನೆ ಬಿಕ್ಕಟ್ಟು ತಡೆಯಿರಿ; ಮುಖ್ಯಮಂತ್ರಿಗಳಿಗೆ ಕಿರಣ್ ಮಜುಂಮ್ದಾರ್ ಷಾ ಮನವಿ

ಬೆಂಗಳೂರು: ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ಮುಂದುವರೆದರೆ ಐಟಿಬಿಟಿಯಲ್ಲಿ ಕರ್ನಾಟಕ ಜಾಗತಿಕ ನಾಯಕತ್ವವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕೂಡಲೇ ರಾಜ್ಯದಲ್ಲಿನ ಬೆಳವಣಿಗೆಗೆ ಕಡಿವಾಣ ಹಾಕುವಂತೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂಮ್ದಾರ್ ಷಾ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿನ ಧಾರ್ಮಿಕ ಸಂಘರ್ಷದ ಬಗ್ಗೆ ಟ್ವೀಟ್ ಮಾಡಿರುವ ಕಿರಣ್ ಮಜುಂಮ್ದಾರ್ ಷಾ, ಕರ್ನಾಟಕವು ಯಾವಾಗಲೂ ಎಲ್ಲಾ ಸಮುದಾಯಗಳನ್ನು ಒಳಗೊಂಡ ಅಂತರ್ಗತ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತಿದೆ. ಇಲ್ಲಿ ಕೋಮುವಾದಕ್ಕೆ ನಾವು ಅನುಮತಿ ನೀಡಬಾರದು. ITBTಯಂತಹ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ ಅದು ಕರ್ನಾಟಕದ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದಲ್ಲಿನ ಕೋಮು ವಿಭಜನೆಯ ಸಧ್ಯದ ಬೆಳವಣಿಗೆಯನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...