alex Certify BIG NEWS: ಧ್ವನಿವರ್ಧಕಗಳಿಗೆ ನಿಯಮ; ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಸಚಿವ ಆನಂದ್ ಸಿಂಗ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧ್ವನಿವರ್ಧಕಗಳಿಗೆ ನಿಯಮ; ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಸಚಿವ ಆನಂದ್ ಸಿಂಗ್ ಎಚ್ಚರಿಕೆ

ಬೆಂಗಳೂರು: ಮಸೀದಿ, ಚರ್ಚ್, ದೇಗುಲಗಳಲ್ಲಿ ಮೈಕ್ ಬಳಕೆಗೆ ನಿಯಮ ರೂಪಿಸಲಾಗುತ್ತಿದೆ. ಧ್ವನಿವರ್ಧಕಗಳ ವಿಚಾರವಾಗಿ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶವಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆನಂದ್ ಸಿಂಗ್, ಧ್ವನಿವರ್ಧಕಗಳಿಗೆ ವಸತಿ ಪ್ರದೇಶ, ನಗರಗಳಲ್ಲಿ ಎಷ್ಟು ಸೌಂಡ್ ಇರಬೇಕು ಅಂತ ನಿಯಮವಿದೆ. ಪೊಲೀಸ್ ಇಲಾಖೆ ನಿಯಮ ಜಾರಿಗೆ ತರಲು ಸಿಎಂ ಸೂಚನೆ ನೀಡಿದ್ದಾರೆ. ನಿಯಮ ಪಾಲಿಸದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಧ್ವನಿವರ್ಧಕಗಳಿಂದ ಸಮಸ್ಯೆಯಾದವರು ದೂರು ಕೊಟ್ಟರೂ ಕ್ರಮ ಜರುಗಿಸಲಾಗುವುದು ಎಂದರು.

ಸುಪ್ರೀಂ ಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಬೇಕು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿರ್ಬಂಧ ಇದ್ದರೆ ಧ್ವನಿವರ್ಧಕ ಬಳಸುವಂತಿಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...