alex Certify BIG NEWS: ನಟ ದುನಿಯಾ ವಿಜಯ್ – ಪಾನಿಪುರಿ ಕಿಟ್ಟಿ ಗಲಾಟೆ ಕೇಸ್ ಗೆ ಮರುಜೀವ; FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ದುನಿಯಾ ವಿಜಯ್ – ಪಾನಿಪುರಿ ಕಿಟ್ಟಿ ಗಲಾಟೆ ಕೇಸ್ ಗೆ ಮರುಜೀವ; FIR ದಾಖಲು

ನಟ ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಹಳೇ ಗಲಾಟೆ ಪ್ರಕರಣ ಮರುಜೀವ ಪಡೆದುಕೊಂಡಿದ್ದು, ಪಾನಿಪುರಿ ಕಿಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

2018ರಲ್ಲಿ ವಸಂತನಗರದ ಅಂಬೇಡ್ಕರ್ ಭವನದಲ್ಲಿ ನಡೆದಿದ್ದ ದೇಹದಾರ್ಢ್ಯ ಸ್ಪರ್ಧೆ ವೇಳೆ ದುನಿಯಾ ವಿಜಯ್ ಮಗನ ಮೇಲೆ ಪಾನಿಪುರಿ ಕಿಟ್ಟಿ ಕಡೆಯವರು ಹಲ್ಲೆ ನಡೆಸಿದ್ದರು ಎಂಬ ಅರೋಪ ಕೇಳಿಬಂದಿದೆ. ಇದೇ ವಿಚಾರವಾಗಿ ಗಲಾಟೆ ನಡೆದು ದುನಿಯಾ ವಿಜಯ್, ಪಾನಿಪುರಿ ಕಿಟ್ಟಿ ಹಾಗೂ ಮಾರುತಿ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಎರಡೂ ಕಡೆಯಿಂದ ದೂರು ದಾಖಲಾಗಿತ್ತು.

ಆದರೆ ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ಕೋರ್ಟ್ ಪ್ರಕರಣ ಮುಕ್ತಾಯಗೊಳಿಸಿತ್ತು. ಆದರೆ ಈಗ ನಟ ದುನಿಯಾ ವಿಜಯ್ ಅದೇ ಪ್ರಕರಣ ಸಂಬಂಧ, ಪಾನಿಪುರಿ ಕಿಟ್ಟಿ ವಿರುದ್ಧ ಪ್ರತಿ ದೂರು ದಾಖಲಿಸಿದ್ದು, ಕೋರ್ಟ್ ಆದೇಶದ ಮೇರೆಗೆ ಪಾನಿಪುರಿ ಕಿಟ್ಟಿ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾನಿಪುರಿ ಕಿಟ್ಟಿ, ಈ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ, ಈ ಹಿಂದೆಯೂ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈಗಲೂ ಕೋರ್ಟ್ ಮೆಟ್ಟಿಲೇರಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಕೋರ್ಟ್ ನಲ್ಲಿ ಏನು ತೀರ್ಪು ಬರುತ್ತದೆ ಅದರಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...