alex Certify BIG NEWS: ನಡುರಸ್ತೆಯಲ್ಲಿಯೇ ಹೆತ್ತ ಮಗನಿಗೆ ಬೆಂಕಿ ಹಚ್ಚಿದ ತಂದೆ; ಸಾವು – ಬದುಕಿನ ನಡುವೆ ಹೋರಾಡಿ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಡುರಸ್ತೆಯಲ್ಲಿಯೇ ಹೆತ್ತ ಮಗನಿಗೆ ಬೆಂಕಿ ಹಚ್ಚಿದ ತಂದೆ; ಸಾವು – ಬದುಕಿನ ನಡುವೆ ಹೋರಾಡಿ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಮಗ

ಬೆಂಗಳೂರು: ಹೆತ್ತ ತಂದೆಯೇ ಮಗನಿಗೆ ಹಾಡಹಗಲೇ ನಡುರಸ್ತೆಯಲ್ಲಿ ಬೆಂಕಿ ಹಚ್ಚಿದ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, 51 ವರ್ಷದ ಸುರೇಂದ್ರ 25 ವರ್ಷದ ಮಗ ಅರ್ಪಿತ್ ಎಂಬಾತನಿಗೆ ಬೆಂಕಿ ಹಚ್ಚಿ ಕೊಂದಿದ್ದಾರೆ. ಕಳೆದ ವಾರ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಗ ಅರ್ಪಿತ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಗ ಸಾವನ್ನಪ್ಪಿದ್ದಾನೆ.

ಆರೋಪಿ ಸುರೇಂದ್ರ ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಮಗನಿಗೆ ಬೆಂಕಿ ಹಚ್ಚಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಸುರೇಂದ್ರ ಬಿಲ್ಡಿಂಗ್ ಪ್ಯಾಬ್ರಿಕೇಷನ್ ಉದ್ಯೋಗ ಮಾಡುತ್ತಿದ್ದರು. ಮಗನಿಗೆ ಬಿಸಿನೆಸ್ ನೋಡಿಕೊಳ್ಳುವ ಜವಾಬ್ದಾರಿ ನೀಡಿದ್ದರು. ಸುಮಾರು 1.5 ಕೋಟಿ ರೂಪಾಯಿ ಲೆಕ್ಕವೇ ನೀಡಿರಲಿಲ್ಲ. ಕೇಳಿದರೆ ಹಣ ಏನು ಮಾಡಿದೆ ಎಂದು ಹೇಳಲ್ಲ, ಲೆಕ್ಕ ಕೊಟ್ಟರೂ ಸಾಯಿಸುತ್ತೀಯಾ ಕೊಡದಿದ್ದರೂ ಸಾಯಿಸ್ತೀಯಾ ಅದಕ್ಕೆ ಹೇಳಲ್ಲ ಎಂದಿದ್ದನಂತೆ ಮಗ.

ಇದೇ ವಿಚಾರವಾಗಿ ಅಪ್ಪ-ಮಗನ ನಡುವೆ ಗಲಾಟೆ ನಡೆದಿದ್ದು, ಇದರಿಂದ ಸಿಟ್ಟಿಗೆದ್ದ ತಂದೆ ಗೋಡೌನ್ ನಲ್ಲಿದ್ದ ಥಿನ್ನರ್ ಎರಚಿ ಬೆಂಕಿ ಹಚ್ಚಿದ್ದಾರೆ. ಅರ್ಪಿತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...