alex Certify BIG NEWS: ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ; ತೇಜೋವಧೆ ಮಾಡಿದರೆ ಏನಾಗುತ್ತೆ ಎಂಬುದು ಈಗಲಾದರೂ ಗೊತ್ತಾಗಲಿ; ಡಿಕೆಶಿ ವಿರುದ್ಧ ಸಚಿವ ಅಶ್ವತ್ಥನಾರಾಯಣ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ; ತೇಜೋವಧೆ ಮಾಡಿದರೆ ಏನಾಗುತ್ತೆ ಎಂಬುದು ಈಗಲಾದರೂ ಗೊತ್ತಾಗಲಿ; ಡಿಕೆಶಿ ವಿರುದ್ಧ ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ಅಶ್ವತ್ಥನಾರಾಯಣನನ್ನು ಮುಗಿಸುತ್ತೇನೆ ಎಂದು ಹೊರಟ ಡಿ.ಕೆ. ಶಿವಕುಮಾರ್ ಈಗ ತಾನೇ ರಾಜಕೀಯವಾಗಿ ಮುಗಿದು ಹೋಗುತ್ತಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ರಮ್ಯಾ ಟ್ವೀಟ್ ಬಳಿಕ ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿದ್ದಾರೆ. ಇಂಥವರು ನಮ್ಮ ಅಧ್ಯಕ್ಷರಾ ಎಂದು ಮುಜುಗರ ಪಡುತ್ತಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯ, ಸ್ನೇಹ ಸಂಬಂಧವನ್ನು ಪ್ರಶ್ನಿಸುವ ಕೀಳುಮಟ್ಟಕ್ಕೆ ಹೋದ ವ್ಯಕ್ತಿ ಡಿ.ಕೆ. ಶಿವಕುಮಾರ್. ಆಪಾದನೆ ಮಾಡಬೇಕು, ದಿಕ್ಕು ತಪ್ಪಿಸಬೇಕು ಎಂದು ಹೊರಟಿದ್ದ ಡಿ.ಕೆ.ಶಿ. ಗೆ ಅವರದ್ದೇ ಪಕ್ಷದವರು ತಕ್ಕ ಪಾಠ ಕಲಿಸಿದ್ದಾರೆ ಇನ್ಮುಂದೆ ಡಿ.ಕೆ. ಶಿವಕುಮಾರ್ ಯೋಚಿಸಿ ಮಾತನಾಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನುವ ಸ್ಥಿತಿಗೆ ಬಂದಿದ್ದಾರೆ. ಡಿ.ಕೆ. ಶಿವಕುಮಾರ್ ರಾಂಗ್ ನಂಬರ್ ಡಯಲ್ ಮಾಡಿದ್ದು ಅವರ ತಪ್ಪು. ಅನುಕಂಪ ಯಾವತ್ತು ಸಜ್ಜನರ ಮೇಲೆ ಇರುತ್ತೆ ಹೊರತು ಡಿ.ಕೆ.ಶಿವಕುಮಾರ್ ಅವರಂಥವರ ಮೇಲಲ್ಲ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...