alex Certify BIG NEWS: ನನ್ನ ಕಾರು ಅಪಘಾತವಾಗಿಲ್ಲ; ನಡೆದ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ ಸಂಸದ ಪ್ರತಾಪ್ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಕಾರು ಅಪಘಾತವಾಗಿಲ್ಲ; ನಡೆದ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದ ಕಾರು ಪಲ್ಟಿಯಾಗಿ ಗಾಯಗೊಂಡಿದ್ದಾಗಿ ವರದಿಯಾಗಿತ್ತು. ಆದರೆ ನನ್ನ ಕಾರು ಅಪಘಾತವಾಗಿಲ್ಲ, ನನ್ನ ಕಾರಿನ ಸಮೀಪವೇ ಬರುತ್ತಿದ್ದ ಬೇರೊಂದು ಕಾರು ಅಪಘಾತಕ್ಕೀಡಾಗಿತ್ತು ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ರಾಮನಗರ ಜಿಲ್ಲೆ ಮುದಗೆರೆ ಬಳಿ ಹೆದ್ದಾರಿಯಲ್ಲಿ ನನ್ನ ಕಾರಿನ ಸಮೀಪವೇ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ ಅಪಘಾತಕ್ಕೀಡಾಗಿತ್ತು. ನಾನು ನನ್ನ ಕಾರನ್ನು ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದೇನೆ. ಬಳಿಕ ನಾನೇ ಪೊಲೀಸರಿಗೆ ಕರೆ ಮಾಡಿ ಕಾರೊಂದು ಪಲ್ಟಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದೇನೆ. ಹೀಗಾಗಿ ಅಪಘಾತಕ್ಕೀಡಾಗಿದ್ದು ನನ್ನ ಕಾರು ಎಂದು ತಪ್ಪಾಗಿ ಭಾವಿಸಲಾಗಿದೆ. ಆದರೆ ಅಪಘಾತಕ್ಕೀಡಾಗಿದ್ದು ನನ್ನ ಕಾರಲ್ಲ ಎಂದು ಹೇಳಿದರು.

ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಉನ್ನಿಕೃಷ್ಣ ಎಂಬುವವರ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಮುದಗೆರೆ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಗಂಭೀರ ರೀತಿಯ ಸಮಸ್ಯೆಗಳಾಗಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...