alex Certify BIG NEWS: ನನ್ನ ಪಕ್ಷದವರೇ ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ; ಸ್ವಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ ಬಿಜೆಪಿ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಪಕ್ಷದವರೇ ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ; ಸ್ವಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ ಬಿಜೆಪಿ ಶಾಸಕ

ಚಿಕ್ಕಮಗಳೂರು : ಸ್ವಪಕ್ಷದ ಮುಖಂಡರ ವಿರುದ್ಧವೇ ಗರಂ ಆಗಿರುವ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ, ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಎಂ.ಪಿ.ಕುಮಾರಸ್ವಾಮಿ, ನಾನು ಕಾಂಗ್ರೆಸ್ ನತ್ತ ಮುಖ ಮಾಡಿದ್ದೇನೆ ಎಂದು ನಮ್ಮ ಪಕ್ಷದ ಮುಖಂಡರೇ ಅಪಪ್ರಚಾರ ಮಾಡುತ್ತಿದ್ದಾರೆ. ನಾನೇಕೆ ಕಾಂಗ್ರೆಸ್ ಗೆ ಹೋಗಲಿ? ಬಿಜೆಪಿ ಹಾಗೂ ಬಿಜೆಪಿ ನಾಯಕರು ನನ್ನನ್ನು ಚೆನ್ನಾಗಿ ನಡೆಸಿಕೊಂಡಿದ್ದಾರೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಹೀಗಿರುವಾಗ ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಸುಳ್ಳು ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿಯಾಗಲಿ, ನಿಗಮ ಮಂಡಳಿ ವಿಚಾರವಾಗಿಯಾಗಲಿ ನಾನು ಯಾವುದೇ ಲಾಬಿ ನಡೆಸಿಲ್ಲ. ಲಾಬಿ ನಡೆಸುವ ಉದ್ದೇಶವೂ ನನಗಿಲ್ಲ. ಹೀಗಿದ್ದರೂ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...