alex Certify BIG NEWS: ನಮಗೆ ನೀರು ಕೊಡಿ ಇಲ್ಲವೇ ಕರ್ನಾಟಕಕ್ಕೆ ಹೋಗುತ್ತೇವೆ; ಮಹಾರಾಷ್ಟ್ರ ಸರ್ಕಾರಕ್ಕೆ ಗಡುವು ನೀಡಿದ ಜತ್ ತಾಲೂಕು ಜನರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಮಗೆ ನೀರು ಕೊಡಿ ಇಲ್ಲವೇ ಕರ್ನಾಟಕಕ್ಕೆ ಹೋಗುತ್ತೇವೆ; ಮಹಾರಾಷ್ಟ್ರ ಸರ್ಕಾರಕ್ಕೆ ಗಡುವು ನೀಡಿದ ಜತ್ ತಾಲೂಕು ಜನರು

ಸಾಂಗ್ಲಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಜನರು ಮಹಾ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ನಮಗೆ ನೀರು ಕೊಡಿ ಇಲ್ಲವಾದಲ್ಲಿ ಕರ್ನಾಟಕಕ್ಕೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ನಿರಂತರವಾಗಿ ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ಜತ್ ತಾಲೂಕಿನ 42 ಗ್ರಾಮಗಳ ಜನರು ಉಗದಿ ಗ್ರಾಮದಲ್ಲಿ ಸಭೆ ಸೇರಿದ್ದು, ನಮಗೆ ನೀರು ಕೊಡಿ ಇಲ್ಲವಾದಲ್ಲಿ ಕರ್ನಾಟಕಕ್ಕೆ ಹೋಗುತ್ತೇವೆ ಎಂದು ಒಕ್ಕೊರಲಿನಿಂದ ಘೋಷಣೆ ಮಾಡಿದ್ದಾರೆ.

ತಡರಾತ್ರಿವರೆಗೂ ನೀರಾವರಿ ಹೋರಾಟ ಸಮಿತಿ ಸಭೆಯಲ್ಲಿ ಪಾಲ್ಗೊಂಡ ತಾಲೂಕಿನ ಜನರು ಮಹಾರಾಷ್ಟ್ರ ಸರ್ಕಾರಕ್ಕೆ 8 ದಿನಗಳ ಗಡುವು ನೀಡಿದ್ದಾರೆ. 8 ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಕರ್ನಾಟಕ್ಕೆ ಹೋಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...