alex Certify BIG NEWS: ನಳೀನ್ ಕಟೀಲ್ ನಶೆಯಲ್ಲಿ ಮಾತನಾಡುತ್ತಿದ್ದಾರೆ; ಮೊದಲು ಅವರನ್ನು ವ್ಯಸನಮುಕ್ತ ಕೇಂದ್ರಕ್ಕೆ ದಾಖಲಿಸಲಿ; ರಣದೀಪ್ ಸುರ್ಜೇವಾಲಾ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಳೀನ್ ಕಟೀಲ್ ನಶೆಯಲ್ಲಿ ಮಾತನಾಡುತ್ತಿದ್ದಾರೆ; ಮೊದಲು ಅವರನ್ನು ವ್ಯಸನಮುಕ್ತ ಕೇಂದ್ರಕ್ಕೆ ದಾಖಲಿಸಲಿ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಸಿಂದಗಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ, ಅಧಿಕಾರದ ನಶೆಯಲ್ಲಿ ಕಟೀಲ್ ತೇಲುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ಲಸಿಕೆ ಪಡೆಯಲಿರುವ ಮಕ್ಕಳಿಗೆಂದೇ ನಿರ್ಮಾಣವಾಗಿದೆ ಈ ‘ವಿಶಿಷ್ಟ’ ಲಸಿಕಾ ಕೇಂದ್ರ..!

ಸಿಂದಗಿಯಲ್ಲಿ ಮಾತನಾಡಿದ ಸುರ್ಜೇವಾಲಾ, ನಳೀನ್ ಕಟೀಲ್ ಅಧಿಕಾರದ ನಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮೊನ್ನೆ ಗುಜರಾತ್ ನಲ್ಲಿ ಸಿಕ್ಕ ಡ್ರಗ್ಸ್ ನ್ನು ಕಟೀಲ್ ಸೇವಿಸಿರಬೇಕು. ಹಾಗಾಗಿ ನಶೆಯಲ್ಲಿ ತೇಲುತ್ತಿದ್ದಾರೆ. ಮೊದಲು ಅವರನ್ನು ಬಿಜೆಪಿ ನಾಯಕರು ವ್ಯಸನಮುಕ್ತ ಕೇಂದ್ರಕ್ಕೆ ದಾಖಲಿಸಬೇಕು ಎಂದು ಕಿಡಿಕಾರಿದರು.

ʼಕ್ರೆಡಿಟ್ ಕಾರ್ಡ್ʼ ನ ಈ ಲಾಭ ನಿಮಗೆ ತಿಳಿದಿರಲಿ

ಕಟೀಲ್ ಅವರ ಹೇಳಿಕೆ ಬಿಜೆಪಿ ಸಂಸ್ಕೃತಿಯನ್ನು ತೋರಿಸುತ್ತದೆ. ಒಂದು ಪಕ್ಷದ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ಅರಿತು ಮಾತನಾಡಬೇಕು. ರಾಷ್ಟ್ರೀಯ ಪಕ್ಷವೊಂದರ ನಾಯಕನ ಬಗ್ಗೆ ಕೀಳು ಮಟ್ಟದ ಆರೋಪ ಮಾಡುವುದು ಸರಿಯಲ್ಲ. ನಳೀನ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...