alex Certify BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದನ್ನು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಎಂ ಯಡಿಯೂರಪ್ಪನವರು ಸಿಎಂ ಸ್ಥಾನದಲ್ಲಿ ಮುಂದುವರೆಯಬೇಕೆ ಬೇಡವೇ ಎಂಬ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ಪಕ್ಷದಲ್ಲಿ ಯಾರಿಗೆ ಯಾವಾಗ ಯಾವ ಹುದ್ದೆ ನೀಡಬೇಕು ಎಂಬುದನ್ನೂ ವರಿಷ್ಠರೇ ತೀರ್ಮಾನಿಸುತ್ತಾರೆ ಎಂದರು.

ನಾನು ಈವರೆಗೆ ಯಾವುದನ್ನೂ ಕೇಳಿ ಪಡೆದಿಲ್ಲ. ಹಲವು ಇಲಾಖೆಗಳಿಗೆ ಮಂತ್ರಿಯಾಗಿದ್ದೇನೆ. ಒಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ಬಿಜೆಪಿ ಅಧ್ಯಕ್ಷನೂ ಆಗಿದ್ದೇನೆ. ವಿಪಕ್ಷ ನಾಯಕನಾಗೂ ಕಾರ್ಯ ನಿರ್ವಹಿಸಿದ್ದೇನೆ. ನನ್ನನ್ನು ಸಿಎಂ ಮಾಡಿ ಎಂದು ನಾನು ಯಾವತ್ತೂ ವರಿಷ್ಠರಿಗೆ ಕೇಳಿಲ್ಲ. ಅವರೇ ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...