alex Certify BIG NEWS: ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತೆ; ನನಗೇನೂ ಗೊತ್ತಿಲ್ಲ ಎಂದ ಸಿ.ಪಿ. ಯೋಗೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತೆ; ನನಗೇನೂ ಗೊತ್ತಿಲ್ಲ ಎಂದ ಸಿ.ಪಿ. ಯೋಗೇಶ್ವರ್

ರಾಮನಗರ: ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಸಿ.ಪಿ. ಯೋಗೇಶ್ವರ್, ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನಾನು ಸಿಎಂ ಬಗ್ಗೆ ಏನೇ ಹೇಳಿಕೆ ನೀಡಿದರೂ ಬೆಂಕಿ ಹೊತ್ತಿಕೊಳ್ಳುತ್ತೆ. ಒಂದು ವಾರದಿಂದ ಇದೇ ರೀತಿ ನಡೆಯುತ್ತಿದೆ. ನಾನು ಸಿಎಂ ಬದಲಾವಣೆ ಬಗ್ಗೆ ಯಾವುದೇ ಯತ್ನವನ್ನೂ ಮಾಡಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ ಯಾರು ಬೇಕು ಯಾರು ಬೇಡ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದರು.

ಸಿಎಂ ಕೋವಿಡ್ ನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಹಿಂದೆಯೂ ನಾನು ಅವರ ಬಗ್ಗೆ ಏನೂ ಮಾತನಾಡಿಲ್ಲ. ಈಗಲೂ ನಾನು ಏನೂ ಮಾತನಾಡುತ್ತಿಲ್ಲ. ನಾನು ರಾಜಕೀಯವಾಗಿ ಏನೂ ಮಾತನಾಡಲ್ಲ. ನಾನು ಏನೇ ಮಾತನಾಡಿದರೂ ವಿವಾದವಾಗುತ್ತಿದೆ. ಯಾಕೆ ಹೀಗಾಗುತ್ತಿದೆ ಎಂಬುದು ನನಗೂ ಅರ್ಥವಾಗುತ್ತಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...