alex Certify BIG NEWS: ನಾಳೆಯಿಂದ ನಾವೇ PayCM ಪೋಸ್ಟರ್ ಅಂಟಿಸುತ್ತೇವೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ನಾವೇ PayCM ಪೋಸ್ಟರ್ ಅಂಟಿಸುತ್ತೇವೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಆಂದೋಲನ ಆರಂಭಿಸಿದೆ. ನಾಳೆಯಿಂದ ಕಾಂಗ್ರೆಸ್ ನ ಶಾಸಕರೆಲ್ಲರೂ ಈ ಆದೋಲನದಲ್ಲಿ ಭಾಗಿಯಾಗಲಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

ಪೇಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಕಚೇರಿ ಸಿಬ್ಬಂದಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರೂ ನಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಮ್ಮ ವಿರುದ್ಧ ಅವರೂ ಕೂಡ ಏನೇನೋ ಪೋಸ್ಟರ್ ಅಂಟಿಸಿದ್ದಾರೆ. ಪೊಲೀಸರಿಗೆ ಬಿಜೆಪಿಯವರು ಯಾರೂ ಕಾಣಿಸಲಿಲ್ಲವೇ ? ಅವರನ್ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.

ಪೇಸಿಎಂ ಆಂದೋಲನ ಯಾರೋ ಇಬ್ಬರು ಮಾಡಿದ್ದಲ್ಲ ಇಡೀ ಪಕ್ಷದ ವತಿಯಿಂದ ಸರ್ಕಾರದ ವಿರುದ್ಧ ಆಂದೋಲನ ಮಾಡಿದ್ದೇವೆ. ತಕ್ಷಣ ನಮ್ಮ ಸಿಬ್ಬಂದಿಗಳನ್ನು, ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ನಾಳೆ ಕಾಂಗ್ರೆಸ್ ನ ಎಲಾ ಶಾಸಕರು ಪೇಸಿಎಂ ಪೋಸ್ಟರ್ ಅಂಟಿಸಲಿದ್ದೇವೆ ಎಂದು ಎಚ್ಚರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...