alex Certify BIG NEWS: ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗುತ್ತೆ; ಕುಪೇಂದ್ರ ರೆಡ್ಡಿ ಗೆಲುವು ಖಚಿತ; ಸಿದ್ದರಾಮಯ್ಯ ಬಣ್ಣ ಬಯಲಾಗುತ್ತೆ ಎಂದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗುತ್ತೆ; ಕುಪೇಂದ್ರ ರೆಡ್ಡಿ ಗೆಲುವು ಖಚಿತ; ಸಿದ್ದರಾಮಯ್ಯ ಬಣ್ಣ ಬಯಲಾಗುತ್ತೆ ಎಂದ HDK

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆದ್ದೇ ಗೆಲ್ತಾರೆ. ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಜೆಡಿಎಸ್ ಶಾಸಕರು ಖಾಸಗಿ ಬಸ್ ನಲ್ಲಿ ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಆತ್ಮಸಾಕ್ಷಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕರಿಗೆ ಪತ್ರ ಬರೆದಿದ್ದರು. ಸಿದ್ದರಾಮಯ್ಯ ನಿಜಬಣ್ಣ ಇಂದು ಸಂಜೆ ಚುನಾವಣಾ ಫಲಿತಾಂಶದ ಬಳಿಕ ಕಳಚಿಬೀಳಲಿದೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲುವು ನಿಶ್ಚಿತ. ಜೆಡಿಎಸ್ ಮೈನಾರಿಟಿ ಅಭ್ಯರ್ಥಿ ಹಾಕಿದರೆ ಟೀಕಿಸುತ್ತಾರೆ. ಇಂದು ಕಾಂಗ್ರೆಸ್ 2ನೇ ಅಭ್ಯರ್ಥಿಯಾಗಿ ಮೈನಾರಿಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಯಾವಾಗಲೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಆರೋಪಿಸುತ್ತಿದ್ದರು. ಈಗ ಕಾಂಗ್ರೆಸ್ ನವರು ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸಲು ಹೊರಟಿದ್ದಾರೆ. ಸಿದ್ದರಾಮಯ್ಯ, ರಮೇಶ್ ಕುಮಾರ್ ಆಟವಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಪತ್ರ ಬರೆದು ಬೆಂಬಲ ಕೇಳಿದ್ದಾರೆ. ತಾವೇ ತೋಡಿದ ಖೆಡ್ಡಾಕ್ಕೆ ಸಿದ್ದರಾಮಯ್ಯ ಬಿದ್ದಿದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...