alex Certify BIG NEWS: ನಾಳೆ ಅಥವಾ ನಾಡಿದ್ದು ಹೈಕಮಾಂಡ್ ಜತೆ ಚರ್ಚೆ; ಸಂಪುಟ ವಿಸ್ತರಣೆ ಸುಳಿವು ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಅಥವಾ ನಾಡಿದ್ದು ಹೈಕಮಾಂಡ್ ಜತೆ ಚರ್ಚೆ; ಸಂಪುಟ ವಿಸ್ತರಣೆ ಸುಳಿವು ನೀಡಿದ ಸಿಎಂ

ಬೆಂಗಳೂರು: ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ನಾಳೆ ಅಥವಾ ನಾಡಿದ್ದು ಚರ್ಚಿಸುತ್ತೇನೆ. ವರಿಷ್ಠರ ನಿರ್ಧಾರದ ಮೇಲೆ ತೀರ್ಮಾನ ಮಾಡುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಗಮನ ಹರಿಸುತ್ತಾರೆ ಎಂದು ಹೇಳಿದರು.

ಬಿ.ವೈ.‌ ವಿಜಯೇಂದ್ರಗೆ ಎಂ ಎಲ್ ಸಿ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ನಾವು ಕೆಲ ಹೆಸರನ್ನು ಶಿಫಾರಸು ಮಾಡಿದ್ದೇವೆ. ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ಗೆ ಬಿಟ್ಟದ್ದು ಎಂದರು.

ಇದೇ ವೇಳೆ ಹಳೇ ಮೈಸೂರು ಭಾಗದ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಹಳೇ ಮೈಸೂರು ಭಾಗದಲ್ಲಿ ಬೇರೆ ಪಕ್ಷದ ನಾಯಕರ ಸೇರ್ಪಡೆ ಸಹಜ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...