alex Certify BIG NEWS: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಷ್ಟ್ರದ್ರೋಹವೆಸಗಿರುವ, ಸಂವಿಧಾನಕ್ಕೆ ಅಪಮಾನ ಮಾಡಿರುವ ಸಚಿವ ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಕಳೆದ ನಾಲ್ಕು ದಿನಗಳಿಂದ ಸದನದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. ಆದರೆ ಅದ್ಯಾವುದಕ್ಕೂ ಸರ್ಕಾರ ಬಗ್ಗುತ್ತಿಲ್ಲ. ದೇಶದ ಸ್ವಾಭಿಮಾನವನ್ನು, ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದ್ದು ನಮ್ಮ ಕರ್ತವ್ಯ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದಾರೆ.

ಪ್ರತಿ ತಾಲೂಕು, ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದ್ದಾರೆ. ಈ ಮೂಲಕ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...