alex Certify BIG NEWS: ನಾವೇನು ಗೂಟ ಹೊಡೆದುಕೊಂಡು ಕೂತಿದ್ದಿವಾ…? ಸಂಪುಟದಲ್ಲಿ ಯುವಕರಿಗೆ ಅವಕಾಶ ಕೊಡಬೇಕು ಎಂದ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾವೇನು ಗೂಟ ಹೊಡೆದುಕೊಂಡು ಕೂತಿದ್ದಿವಾ…? ಸಂಪುಟದಲ್ಲಿ ಯುವಕರಿಗೆ ಅವಕಾಶ ಕೊಡಬೇಕು ಎಂದ ಈಶ್ವರಪ್ಪ

ರಾಯಚೂರು: ಹಿರಿಯರು ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕು. ಸಂಪುಟದಲ್ಲಿ ಯುವಕರಿಗೆ ಅವಕಾಶ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಮಂತ್ರಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿರಿಯ ಸಚಿವರು ಮಂತ್ರಿ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಡಬೇಕು. ನಾವೇನು ಗೂಟ ಹೊಡೆದುಕೊಂಡು ಕುಳಿತಿದ್ದೀವಾ ? ಸಚಿವ ಸಂಪುಟದಲ್ಲಿ ಯುವಕರಿಗೆ ಅವಕಾಶ ಕೊಡಬೇಕು. ಬಿಜೆಪಿ ಜತೆ ಕಾಂಗ್ರೆಸ್ ಪಕ್ಷವನ್ನು ಹೋಲಿಕೆ ಮಾಡಬೇಡಿ. ಭಾರತೀಯ ಜನತಾ ಪಾರ್ಟಿ ಸ್ವರ್ಗ, ಕಾಂಗ್ರೆಸ್ ನರಕ. ಪುಣ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸಭೆ ಬಗ್ಗೆ ಮಾತು ಬೇಡ, ಕೂತು ಹೋದರೂ ಒಳ್ಳೆಯದಾಗುತ್ತೆ ಎಂದರು.

ಸಿದ್ದರಾಮಯ್ಯ ಕಾಲನ್ನು ಡಿ.ಕೆ. ಶಿವಕುಮಾರ್ ಕಟ್ ಮಾಡಿದ್ದಾರೆ. ಸಿದ್ದರಾಮಯ್ಯ ಹಿಂದುಳಿದವರಿಗೆ ದ್ರೋಹ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಸಮಾವೇಶ ಮಾಡುವ ಸ್ವಾತಂತ್ರ್ಯ ಸಿದ್ದರಾಮಯ್ಯನವರಿಗಿಲ್ಲ. ಸಿದ್ದರಾಮಯ್ಯ ಕುರುಬ, ಹಿಂದುಳಿದವರನ್ನು ಬೆಳೆಸಿಲ್ಲ. ಸರ್ವಾಧಿಕಾರಿ ಧೋರಣೆಯಿಂದಾಗಿಯೇ ಸಿದ್ದರಾಮಯ್ಯ ಸೋತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...