ಹಾಸನ ಜಿಲ್ಲೆಯ ಹಾರನಹಳ್ಳಿ ಕೋಡಿಮಠದ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನಿಖರ ಭವಿಷ್ಯ ಹೇಳುವುದಕ್ಕೆ ಹೆಸರಾದವರು. ಇದೀಗ ಅವರು ಮತ್ತೊಂದು ಭವಿಷ್ಯ ನುಡಿದಿದ್ದು ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ್ದಾರೆ.
ಭೂಮಿ ನಡುಗಿತು, ಮೇಘ ಅಬ್ಬರಿಸಿತು, ನೀರು ತಲ್ಲಣಗೊಂಡಿತು ಎಂದು ಹೇಳುವ ಮೂಲಕ ಮುಂಬರುವ ದಿನಗಳಲ್ಲಿ ಮತ್ತಷ್ಟು ಪ್ರಾಕೃತಿಕ ವಿಕೋಪಗಳು ಸಂಭವಿಸಬಹುದು ಎಂಬ ಮುನ್ನೆಚ್ಚರಿಕೆ ನೀಡಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಅಲ್ಲದೇ ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಧರ್ಮಾಧರಿತ ಗಲಭೆಗಳು ನಡೆಯುತ್ತಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಇದಕ್ಕೆ ಜ್ಞಾನದ ಕೊರತೆಯೇ ಕಾರಣ. ಈ ಕಾರಣಕ್ಕಾಗಿ ದೇಶದಲ್ಲಿ ಅಶಾಂತಿ ವಾತಾವರಣ ಮೂಡುತ್ತಿದೆ ಎಂದಿದ್ದಾರೆ.