alex Certify BIG NEWS: ನಿಮ್ಮ ರಾಷ್ಟ್ರೀಯ ನಾಯಕರಿಗಿಂತ ನೀನು ದೊಡ್ಡವನಾ ? ಹಿಂದುತ್ವದ ಬಗ್ಗೆ ಅಪಮಾನ ಮಾಡಿದವರಿಗೆ ದೇಶದಲ್ಲಿ ಸ್ಥಾನವಿಲ್ಲ; ಸತೀಶ್ ಜಾರಕಿಹೊಳಿ ವಿರುದ್ಧ ಈಶ್ವರಪ್ಪ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಮ್ಮ ರಾಷ್ಟ್ರೀಯ ನಾಯಕರಿಗಿಂತ ನೀನು ದೊಡ್ಡವನಾ ? ಹಿಂದುತ್ವದ ಬಗ್ಗೆ ಅಪಮಾನ ಮಾಡಿದವರಿಗೆ ದೇಶದಲ್ಲಿ ಸ್ಥಾನವಿಲ್ಲ; ಸತೀಶ್ ಜಾರಕಿಹೊಳಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಹಿಂದು ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಹಿಂದೂ ಹಿಂದುತ್ವದ ಬಗ್ಗೆ ಯಾರು ಅಪಮಾನ ಮಾಡುತ್ತಾರೋ ಅಂತವರಿಗೆ ದೇಶದಲ್ಲಿ ಸ್ಥಾನಮಾನ ಇಲ್ಲ. ವಾಲ್ಮೀಕಿ ರಕ್ತ ಹಂಚಿಕೊಂಡು ಹುಟ್ಟಿದ ಸತೀಶ್ ಜಾರಕಿಹೊಳಿಯಿಂದ ರಾಮಾಯಣ, ಮಹಾಭಾರತಕ್ಕೆ ಅಪಮಾನವಾಗಿದೆ. ಈಗ ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಅವರ ಪಕ್ಷದ ಮುಖಂಡರು, ನಾಯಕರು ಖಂಡಿಸಿದ್ದಾರೆ. ಈತ ಅವರಿಗಿಂತ ದೊಡ್ಡವನಾ? ಎಂದು ಕಿಡಿಕಾರಿದ್ದಾರೆ.

ಪಕ್ಷದ ನಾಯಕರ ಒತ್ತಾಯಕ್ಕೆ ಮಣಿದು ಕ್ಷಮೆ ಕೇಳಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ ಸತೀಶ್ ಜಾರಕಿಹೊಳಿ. ನಿಮ್ಮ ರಾಷ್ಟ್ರೀಯ ನಾಯಕರಿಗಿಂತ ನೀನು ದೊಡ್ಡ ಮನುಷ್ಯನಾ? ಎಂದು ಪ್ರಶ್ನಿಸಿದ್ದಾರೆ.

ಇಂದು ಕನಕದಾಸರ ಜಯಂತಿ. ಮೊದಲ ಹಿಂದುತ್ವದ ಪ್ರತಿಪಾದಕ ಕನಕದಾಸರು. ಮಹರ್ಷಿ ವಾಲ್ಮೀಕಿ ರಾಮಾಯಣ ಬರೆದು ಇಡೀ ಪ್ರಪಂಚಕ್ಕೆ ಪ್ರಖ್ಯಾತಿಗೊಳಿಸಿದರು. ಹೀಗಿರುವಾಗ ಹಿಂದು ಪದದ ಬಗ್ಗೆ ಸತೀಶ್ ಜಾರಕಿಹೊಳಿ ಕೇವಲವಾಗಿ ಮಾತನಾಡುತ್ತಿದ್ದಾರೆ. ಹಿಂದೂ, ಹಿಂದುತ್ವ ಅಪಮಾನ ಮಾಡಿದರೆ ದೇಶದಲ್ಲಿ ಸ್ಥಾನಮಾನವಿರಲ್ಲ ಎಂದು ಎಚ್ಚರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...