alex Certify BIG NEWS: ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದ ಕನ್ನಡಿಗ; ಸ್ವಕ್ಷೇತ್ರದ ಯುವಕನ ಸಾಧನೆಗೆ ಸಚಿವ ಗೋವಿಂದ ಕಾರಜೋಳ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದ ಕನ್ನಡಿಗ; ಸ್ವಕ್ಷೇತ್ರದ ಯುವಕನ ಸಾಧನೆಗೆ ಸಚಿವ ಗೋವಿಂದ ಕಾರಜೋಳ ಅಭಿನಂದನೆ

ಬೆಂಗಳೂರು: ನೀಟ್ ಸೂಪರ್ ಸ್ಪೆಷಾಲಿಟಿ ಪರೀಕ್ಷೆಯಲ್ಲಿ ಎರಡು ವಿಭಾಗದಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದ ಸ್ವಕ್ಷೇತ್ರದ ಯುವಕನ ಸಾಧನೆಗೆ ಸಚಿವ ಗೋವಿಂದ ಕಾರಜೋಳ ಮೆಚ್ಚುಗೆ ವ್ಯಕ್ತಪಡಿಸಿದ್ದು, ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ರನ್ನ ಬೆಳಗಲಿ ಗ್ರಾಮದ ಯುವಕ ಚಿದಾನಂದ ಕುಂಬಾರ ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಗೋವಿಂದ ಕಾರಜೋಳ, ಯುವಕನಿಗೆ ಸ್ವತಃ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.

ಎರಡು ವಿಷಯಗಳಲ್ಲಿ ಮೊದಲ ರ್ಯಾಂಕ್ ಬಂದಿರುವುದು ಶ್ಲಾಘನೀಯ. ಆರಂಭದಲ್ಲಿ ಎಂಬಿಬಿಎಸ್ ಗೆ ನಾನು ಸಹಾಯ ಮಾಡಿದ್ದು ಸರಿ. ಆದರೆ ನೀನು ಸಾಧನೆ ಮಾಡಿರುವುದು ಬಹಳ ದೊಡ್ಡದು. ನೂರಾರು ವಿದ್ಯಾರ್ಥಿಗಳಿಗೆ ನಾನು ಸಹಾಯ ಮಾಡಿದ್ದೇನೆ. ಆದರೆ ನಿನ್ನಂಥ ಸಾಧನೆ ಮಾಡಿದವರು ಯಾರೂ ಇಲ್ಲ. ಬಹಳ ಸಂತಸವಾಗಿದೆ. ದೇವರು ಒಳ್ಳೆಯದು ಮಾಡಲಿ. ಇನ್ನು ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...