ಚಿಕ್ಕಮಗಳೂರು: ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ತರಿಕೆರೆ ತಾಲೂಕಿನ ಭದ್ರಾ ಜಲಾಶಯದ ಕಾಲುವೆಯಲ್ಲಿ ನಡೆದಿದೆ.
ರವಿ (31), ಅನನ್ಯ (17), ಶಾಮವೇಣಿ (16) ಮೃತ ದುರ್ದೈವಿಗಳು. ರವಿ ಲಕ್ಕವಳ್ಳಿಯ ನಿವಾಸಿಯಾಗಿದ್ದು, ಅನನ್ಯ ಶಿವಮೊಗ್ಗ ಮೂಲದವರಾಗಿದ್ದಾರೆ. ಹಾಗೂ ಶಾಮವೇಣಿ ನಂಜನಗೂಡು ಮೂಲದವರು.
ನೀರಿನಲ್ಲಿ ಆಟವಾಡಲು ಹೋಗಿ ಕಾಲು ಜಾರಿ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಭದ್ರಾ ಡ್ಯಾಂನ ಪಕ್ಕದ ಕಾಲುವೆಯಲ್ಲಿ ಈ ದುರಂತ ಸಂಭವಿಸಿದೆ.