alex Certify BIG NEWS: ನೆಲೆಯಿಲ್ಲದ ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ‘ಕೈ’ ನಾಯಕರಿಗೆ ಶೋಭಾ ಕರಂದ್ಲಾಜೆ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೆಲೆಯಿಲ್ಲದ ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ‘ಕೈ’ ನಾಯಕರಿಗೆ ಶೋಭಾ ಕರಂದ್ಲಾಜೆ ತಿರುಗೇಟು

ಚಿಕ್ಕಮಗಳೂರು: ಆರ್.ಎಸ್.ಎಸ್. ಹಾಗೂ ತಾಲಿಬಾನ್ ಒಂದೇ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಆರ್.ಧ್ರುವನಾರಾಯಣ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನೆಲೆ ಇಲ್ಲದೇ ಕಾಂಗ್ರೆಸ್ ನವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಮನಸ್ಥಿತಿ ಭಯೋತ್ಪಾದನೆ ಪ್ರೋತ್ಸಾಹಿಸುವುದಾಗಿತ್ತು. ಅದಕ್ಕಾಗಿಯೇ ಕಾಶ್ಮೀರದಲ್ಲಿ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು. ಈಗ ಕಾಶ್ಮೀರದಲ್ಲಿ ಸಮಸ್ಯೆ ಮುಗಿದು ಉಗ್ರರ ಹುಟ್ಟಡಗಿದೆ ಎಂದರು.

ಸ್ಕ್ಯಾನಿಂಗ್ ನಲ್ಲಿ ಕಳ್ಳನ ಅಸಲಿಯತ್ತು ಬಯಲು

ಕಾಂಗ್ರೆಸ್ ನಾಯಕರು ಆರ್.ಎಸ್.ಎಸ್ ನ್ನು ತಾಲಿಬಾನಿಗಳಿಗೆ ಹೋಲಿಸುತ್ತಿದ್ದಾರೆ. ಇದರಿಂದಲೇ ಅವರ ಮನಸ್ಥಿತಿ ಏನೆಂಬುದು ತಿಳಿಯುತ್ತಿದೆ. ಯಾರು ದೇಶದ್ರೋಹಿಗಳು, ಯಾರು ದೇಶ ಭಕ್ತರು ಎಂಬುದು ಜನರಿಗೆ ಗೊತ್ತಿದೆ. ಜನರೇ ಎಲ್ಲದಕ್ಕೂ ಉತ್ತರ ಕೊಡುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...