alex Certify BIG NEWS: ನೈತಿಕ ಪೊಲೀಸ್ ಗಿರಿ ಪ್ರಕರಣ; ಪೊಲೀಸರು ಅಧಿಕಾರವನ್ನು ಬಿಜೆಪಿಗೆ ಕೊಟ್ಟುಬಿಟ್ಟಿದ್ದಾರೆ; ಡಿ.ಕೆ.ಶಿ. ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೈತಿಕ ಪೊಲೀಸ್ ಗಿರಿ ಪ್ರಕರಣ; ಪೊಲೀಸರು ಅಧಿಕಾರವನ್ನು ಬಿಜೆಪಿಗೆ ಕೊಟ್ಟುಬಿಟ್ಟಿದ್ದಾರೆ; ಡಿ.ಕೆ.ಶಿ. ವಾಗ್ದಾಳಿ

ಮಂಗಳೂರು: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿವೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಅಧಿಕಾರಿಗಳನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನೈತಿಕ ಪೊಲೀಸ್ ಗಿರಿ ಪ್ರಕರಣ ಹೆಚ್ಚುತ್ತಿದೆ. ಪೊಲೀಸರು ತಮ್ಮ ಅಧಿಕಾರವನ್ನು ಬಿಜೆಪಿಗೆ ಕೊಟ್ಟುಬಿಟ್ಟಿದ್ದಾರೆ. ಸರ್ಕಾರ, ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಗರಂ ಆದರು.

SHOCKING NEWS: ಕಲುಷಿತ ನೀರಿಂದ ಸರಣಿ ಸಾವು; ಜೀವ ಉಳಿಸಿಕೊಳ್ಳಲು ಭಯದಿಂದ ಊರು ತೊರೆದ ಗ್ರಾಮಸ್ಥರು

ಇದೇ ವೇಳೆ ಇಂದು ನಾನು ಸುಳ್ಯ ಕೋರ್ಟ್ ಗೆ ಹಾಜರಾಗುತ್ತಿದ್ದೇನೆ. ನಾನು ಇಂಧನ ಸಚಿವನಾಗಿದ್ದಾಗ ಯಾರೋ ಒಬ್ಬ ನನಗೆ ಕರೆ ಮಾಡಿ ಬಾಯಿಗೆ ಬಂದಂತೆ ಮಾತನಾಡಿದ್ದ. ಈ ಸಂಬಂಧ ನಾನು ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಪ್ರಕರಣದ ವಿಚಾರಣೆ ಕೋರ್ಟ್ ನಲ್ಲಿದೆ. ಹಾಗಾಗಿ ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...