alex Certify BIG NEWS: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಸನ್ಮಾನ; ಇಲ್ಲವಾದರೆ ಸತ್ಯಾಗ್ರಹ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಸನ್ಮಾನ; ಇಲ್ಲವಾದರೆ ಸತ್ಯಾಗ್ರಹ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 1ರಿಂದ ಸತ್ಯಾಗ್ರಹ ಆರಂಭಿಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಯಡಿಯೂರಪ್ಪನವರ ಪರಮ ಶಿಷ್ಯ, ರೈಟ್ ಪರ್ಸನ್ ಬಸವರಾಜ್ ಬೊಮ್ಮಾಯಿ ಅವರು ಈಗ ಸಿಎಂ ಆಗಿದ್ದಾರೆ. ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಅಧಿವೇಶನದಲ್ಲಿ ಘೋಷಣೆ ಮಾಡಲಿ. ಈ ಬಗ್ಗೆ ಲಿಂಗಾಯಿತ ಸಮುದಾಯದ ಶಾಸಕರು ಸದನದಲ್ಲಿ ಮಾತನಾಡಲಿ ಎಂದು ಆಗ್ರಹಿಸಿದರು.

‘ಡ್ಯಾನ್ಸ್ ದಿವಾನೆ-3’ಯಲ್ಲಿ ಭಾವುಕರಾಗಿ ಕಣ್ಣೀರಿಟ್ಟ ನಿರ್ದೇಶಕ ರೋಹಿತ್ ಶೆಟ್ಟಿ: ಕಾರಣವೇನು ಗೊತ್ತಾ….?

ಅಕ್ಟೋಬರ್ 1ರೊಳಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಮೀಸಲಾತಿ ಘೋಷಿಸಿದರೆ ಅವರನ್ನು ಸನ್ಮಾನ ಮಾಡುತ್ತೇವೆ. ಇಲ್ಲವಾದರೆ ಅ.1ರಿಂದ ಸತ್ಯಾಗ್ರಹ ಹೋರಾಟ ಆರಂಭ ಮಾಡುತ್ತೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...