alex Certify BIG NEWS: ಪಕ್ಷೇತರನಾಗಿ ಚುನಾವಣೆಗೆ ನಿಲ್ಲುವ ವಿಚಾರವಿತ್ತು ಆದರೆ….. ಸಭಾಪತಿ ಹೊರಟ್ಟಿ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಕ್ಷೇತರನಾಗಿ ಚುನಾವಣೆಗೆ ನಿಲ್ಲುವ ವಿಚಾರವಿತ್ತು ಆದರೆ….. ಸಭಾಪತಿ ಹೊರಟ್ಟಿ ಹೇಳಿದ್ದೇನು…?

ಬೆಂಗಳೂರು: ನಾನು ಯಾವುದೇ ಪಕ್ಷದಲ್ಲಿದ್ದರೂ ಶಿಕ್ಷಕರು ನನ್ನ ಕೈಬಿಡಲ್ಲ ಎಂಬ ವಿಶ್ವಾಸ ನನಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ಸಭಾಪತಿಯಾಗಿದ್ದರಿಂದ ನಾನು ಪಕ್ಷೇತರನಾಗಿ ನಿಲ್ಲುವ ವಿಚಾರವಿತ್ತು. ಕುಮಾರಸ್ವಾಮಿ ಕೂಡ ಈ ಬಗ್ಗೆ ಸಮ್ಮತಿ ನೀಡಿದ್ದರು. ಆದರೆ ನೀವೆ ನಮ್ಮ ಪಕ್ಷಕ್ಕೆ ಬನ್ನಿ ಎಂದು ಕೆಲವರು ಆಹ್ವಾನ ನೀಡಿದರು. ಕೆಲ ಚರ್ಚೆಗಳು ನಡೆದಿದೆ ಎಂದು ಬಿಜೆಪಿಗೆ ಸೇರಲು ಒಪ್ಪಿದೆ ಎಂದರು.

ಜೆಡಿಎಸ್ ನನ್ನ ಬೆಳೆಸಿದೆ. ಕರೆದು ಮಂತ್ರಿ ಮಾಡಿದ್ದು ಗೌಡರು. ಜೆಡಿಎಸ್ ಬಿಟ್ಟು ಹೋಗಿ ಎಂದು ನಾನು ಯಾರಿಗೂ ಹೇಳಿಲ್ಲ. ನನಗೆ ಬಿಜೆಪಿಯಿಂದ ಆಹ್ವಾನ ಬಂದಿದೆ ಈ ನಿಟ್ಟಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ನಾನು ಯಾವ ಪಕ್ಷಕ್ಕೆ ಹೋದರೂ ಶಿಕ್ಷಕರು ನನ್ನ ಕೈ ಹಿಡಿಯುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...