alex Certify BIG NEWS: ಪರಿಷತ್ ಚುನಾವಣೆ; ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು; ಎ. ಮಂಜು ಪುತ್ರನಿಗೆ ಮುಖಭಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ಚುನಾವಣೆ; ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು; ಎ. ಮಂಜು ಪುತ್ರನಿಗೆ ಮುಖಭಂಗ

ಮಡಿಕೇರಿ: ಇಂದು ವಿಧಾನಪರಿಷತ್ 25 ಸ್ಥಾನಗಳ ಫಲಿತಾಂಶ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಕೊಡಗಿನಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದೆ.

ಕೊಡಗು ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಪುತ್ರ ಕೆ. ಮಂಥರ್ ವಿರುದ್ಧ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೊಡಗು ಕ್ಷೇತ್ರದಲ್ಲಿ 1229 ಮತ ಚಲಾವಣೆಯಾಗಿತ್ತು.

BREAKING NEWS: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ಇನ್ನಿಲ್ಲ

ಕೆ. ಮಂಥರ್, ಮಾಜಿ ಸಚಿವ ಎ. ಮಂಜು ಪುತ್ರನಾಗಿದ್ದು, ಎ. ಮಂಜು ಅವರು ತಾವು ಬಿಜೆಪಿಯಲ್ಲಿದ್ದುಕೊಂಡೇ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದರು. ಪರಿಷತ್ ಚುನಾವಣೆಯಲ್ಲಿ ಮಗನನ್ನು ಗೆಲ್ಲಿಸಿ ಬಳಿಕ ನಿಧಾನವಾಗಿ ಮತ್ತೆ ಕಾಂಗ್ರೆಸ್ ನತ್ತ ಸರಿಯಲು ಮಂಜು ಯತ್ನಿಸಿದ್ದರು ಎನ್ನಲಾಗಿದೆ. ಆದರೆ ಇದೀಗ ಮಂಥರ್ ಗೌಡ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಗೆಲುವು ಪಡೆದಿದ್ದಾರೆ. ಹಾಗಾಗಿ ಆರಂಭದಲ್ಲಿಯೇ ಮುಖಭಂಗವಾದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...