alex Certify BIG NEWS: ಪರಿಷತ್ ಚುನಾವಣೆ ಬೆನ್ನಲ್ಲೇ ತಾರಕಕ್ಕೇರಿದ ಬಿಜೆಪಿ ನಾಯಕರ ಗಲಾಟೆ; ಮಾಜಿ ಸಿಎಂ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿಕೊಂಡ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ಚುನಾವಣೆ ಬೆನ್ನಲ್ಲೇ ತಾರಕಕ್ಕೇರಿದ ಬಿಜೆಪಿ ನಾಯಕರ ಗಲಾಟೆ; ಮಾಜಿ ಸಿಎಂ ಸಮ್ಮುಖದಲ್ಲೇ ಕೈ ಕೈ ಮಿಲಾಯಿಸಿಕೊಂಡ ನಾಯಕರು

ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ರಾಜಕೀಯ ನಾಯಕರ ಪ್ರಚಾರ ಸಭೆಗಳು ಜೋರಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲೇ ಬಿಜೆಪಿ ನಾಯಕರು ವಾಗ್ವಾದಕ್ಕಿಳಿದ ಘಟನೆ ನಡೆದಿದೆ.

ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಶಾಸಕ ಅರುಣಕುಮಾರ ಪೂಜಾರ ಹಾಗೂ ಎಂ ಎಲ್ ಸಿ ಶಂಕರ್ ನಡುವಿನ ಗಲಾಟೆ ಬಹಿರಂಗವಾಗಿದ್ದು, ಚುನಾವಣೆ ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಮುಖಂಡರ ನಡುವೆಯೇ ವಾಗ್ವಾದಕ್ಕಿಳಿದು, ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ತಲುಪಿದ್ದಾರೆ.

ಈ ವೇಳೆ ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ಶಾಸಕ ಅರುಣಕುಮಾರ ಅವರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...