alex Certify BIG NEWS: ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ; ರಾಜಕೀಯ ನಿಂತ ನೀರಲ್ಲ……ಸಹನೆ, ಸೌಜನ್ಯದಿಂದ ಇರುವಂತೆ ಬೆಂಬಲಿಗರಿಗೆ ಮನವಿ ಮಾಡಿದ ಬಿ.ವೈ. ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ; ರಾಜಕೀಯ ನಿಂತ ನೀರಲ್ಲ……ಸಹನೆ, ಸೌಜನ್ಯದಿಂದ ಇರುವಂತೆ ಬೆಂಬಲಿಗರಿಗೆ ಮನವಿ ಮಾಡಿದ ಬಿ.ವೈ. ವಿಜಯೇಂದ್ರ

ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ಸಂಚಲನ: ದೆಹಲಿಗೆ ಬಿ.ವೈ. ವಿಜಯೇಂದ್ರ ಪ್ರಯಾಣ- Kannada Prabha

ಬೆಂಗಳೂರು: ವಿಧಾನಪರಿಷತ್ ಗೆ ಬಿ.ವೈ.ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಕರ್ತರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿರುವ ಬಿ.ವೈ. ವಿಜಯೇಂದ್ರ, ಅನಗತ್ಯ ಟೀಕೆ, ಟಿಪ್ಪಣಿಯಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ. ರಾಜಕೀಯ ನಿಂತ ನೀರಲ್ಲ, ಅದು ಹರಿಯುವ ನದಿಯ ಹಾಗೆ ಕಾರ್ಯಕರ್ತರು, ಅಭಿಮಾನಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು. ಹಿತೈಷಿಗಳು ಎಂದು ಹೇಳಿಕೊಳ್ಳುವ ಪ್ರತಿಯೊಬ್ಬರೂ ಇದನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.

ಪೂಜ್ಯ ತಂದೆಯವರ ಭಾವನೆಗಳಿಗೆ ಮಸಿ ಬಳಿದಂತಾಗುತ್ತದೆ. ನಮ್ಮನ್ನು ಬೆಂಬಲಿಸಿದಂತೆ ಆಗಲ್ಲ ಎಂಬುದನ್ನು ಅರಿಯಬೇಕು. ಪಕ್ಷದ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಕೈಬಿಟ್ಟಿಲ್ಲ, ಬಿಡುವುದೂ ಇಲ್ಲ. ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...