alex Certify BIG NEWS: ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹೆಚ್.ಎಂ. ರೇವಣ್ಣಗೆ ಕೊರೊನಾ ಸೋಂಕು; ಕಾಂಗ್ರೆಸ್ ನಾಯಕರಿಗೂ ಆರಂಭವಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹೆಚ್.ಎಂ. ರೇವಣ್ಣಗೆ ಕೊರೊನಾ ಸೋಂಕು; ಕಾಂಗ್ರೆಸ್ ನಾಯಕರಿಗೂ ಆರಂಭವಾಯ್ತು ಆತಂಕ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಎಂ. ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ನಾಯಕರಿಗೆ ಕೋವಿಡ್ ಭೀತಿ ಶುರುವಾಗಿದೆ.

ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದ ಕಾಂಗ್ರೆಸ್ ನಾಯಕರು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಆರಂಭಿಸಿದ್ದಾರೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಹೆಚ್.ಎಂ. ರೇವಣ್ಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವರಿಗೆ ಸೋಂಕಿನ ಬೆನ್ನಲ್ಲೇ ಅವರ ಸಂಪರ್ಕದಲ್ಲಿದ್ದ ಕಾಂಗ್ರೆಸ್ ನ ಹಲವು ನಾಯಕರಿಗೂ ಕೊರೊನಾ ಆತಂಕ ಶುರುವಾಗಿದ್ದು, ಪಾದಯಾತ್ರೆಯಲ್ಲಿಯೂ ಸೋಂಕು ಹರಡಿರುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...