alex Certify BIG NEWS: ಪಾದಯಾತ್ರೆ ಬೇಡ, ತೀರ್ಥಯಾತ್ರೆ ಮಾಡಿ ಎಂದು ಕಾಂಗ್ರೆಸ್ ಗೆ ಜನರ ಸಂದೇಶ; ವ್ಯಂಗ್ಯವಾಡಿದ ಸಚಿವ ಆರ್. ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾದಯಾತ್ರೆ ಬೇಡ, ತೀರ್ಥಯಾತ್ರೆ ಮಾಡಿ ಎಂದು ಕಾಂಗ್ರೆಸ್ ಗೆ ಜನರ ಸಂದೇಶ; ವ್ಯಂಗ್ಯವಾಡಿದ ಸಚಿವ ಆರ್. ಅಶೋಕ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸುತ್ತಿದೆ. ವಿಪಕ್ಷ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ ಈ ಮೂಲಕ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್. ಅಶೋಕ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಹಾಗೂ ಮಣಿಪುರಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಪಂಜಾಬ್ ನಲ್ಲಿ ಮಾತ್ರ ಅಧಿಕಾರದಲ್ಲಿ ಇತ್ತು. ಆದರೆ ಈಗ ಅಲ್ಲಿಯೂ ಸೋಲನುಭವಿಸಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಪಾದಯಾತ್ರೆ ಬೇಡ ತೀರ್ಥಯಾತ್ರೆ ಮಾಡಿ ಎಂದು ಜನ ಸಂದೇಶ ರವಾನಿಸಿದ್ದಾರೆ ಎಂದು ಟೀಕಿಸಿದರು.

BIG NEWS: ಹಿನ್ನಡೆ ಅನುಭವಿಸಿದ ಮೂವರು ಹಾಲಿ ಸಿಎಂಗಳು..! ಗೆಲುವಿನ ಹಾದಿಯಲ್ಲಿ ಯೋಗಿ ಆದಿತ್ಯನಾಥ್​

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಗೆ ಇದೇ ಮಾದರಿಯ ಫಲಿತಾಂಶ ಬರಲಿದೆ. ಕಾಂಗ್ರೆಸ್ ನಾಯಕರು ಪಂಜಾಬ್ ನಲ್ಲಿ ಅಬ್ಬರದ ಪ್ರಚಾರ ಮಾಡಿದ್ದರು. ಆದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...