alex Certify BIG NEWS: ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್; ಇಬ್ಬರು ಬಾಲಕರ ಸ್ಥಿತಿ ಗಂಭೀರ; ಸಾವು-ಬದುಕಿನ ನಡುವೆ ನರಳಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್; ಇಬ್ಬರು ಬಾಲಕರ ಸ್ಥಿತಿ ಗಂಭೀರ; ಸಾವು-ಬದುಕಿನ ನಡುವೆ ನರಳಾಟ

ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋದ ಮಕ್ಕಳು ಕರೆಂಟ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.

ವಿಜಯಾನಂದ ನಗರದ ಸುಪ್ರೀತ್ ಹಾಗೂ ಚಂದ್ರು ಗಾಯಾಳು ಬಾಲಕರು. ಪಾರಿವಾಳವನ್ನು ಹಿಡಿಯುವ ಆಸೆಯಿಂದ ಮಕ್ಕಳಿಬ್ಬರೂ ಮನೆಯ ಮಹಡಿ ಮೇಲೆ ಹತ್ತಿದ್ದಾರೆ. ಹೈಟೆನ್ಶನ್ ವಿದ್ಯುತ್ ತಂತಿ ಮೇಲೆ ಪಾರಿವಾಳ ಕುಳಿತಿತ್ತು. ಅದನ್ನು ಹಿಡಿಯಲೆಂದು ಬಾಲಕರಿಬ್ಬರೂ ಯತ್ನಿಸಿದ್ದಾರೆ. ಕಬ್ಬಿಣದ ರಾಡ್ ನಿಂದ ಹೈಟೆನ್ಶನ್ ವಿದ್ಯುತ್ ತಂತಿ ಟಚ್ ಮಾಡಿದ್ದಾರೆ. ಕ್ಷಣಾರ್ಧದಲ್ಲಿ ಕರೆಂಟ್ ಶಾಕ್ ಹೊಡೆದಿದೆ. ಮಕ್ಕಳಿಬ್ಬರೂ ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿ ತಲುಪಿದ್ದಾರೆ.

ಕರೆಂಟ್ ತೀವ್ರತೆಗೆ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಕೂಡ ಸ್ಫೋಟಗೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ಮಕ್ಕಳಿಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರು ಎಂಬ ಬಾಲಕನಿಗೆ ಶೇ.90ರಷ್ಟು ಸುಟ್ಟಗಾಯಗಳಾಗಿದ್ದರೆ, ಸುಪ್ರೀತ್ ಗೆ ಶೇ.70ರಷ್ಟು ಸುಟ್ಟಗಾಯಗಳಾಗಿವೆ.

ಇಬ್ಬರು ಬಾಲಕರು ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...