alex Certify BIG NEWS: ‘ಪಿಎಂ ಕಿಸಾನ್’ ಯೋಜನೆ ಅಡಿ ಹಣ ಪಡೆದ ಅನರ್ಹರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಪಿಎಂ ಕಿಸಾನ್’ ಯೋಜನೆ ಅಡಿ ಹಣ ಪಡೆದ ಅನರ್ಹರಿಗೆ ಬಿಗ್ ಶಾಕ್

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದು, ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿ ಮಾಡಲಾಗುತ್ತಿದೆ.

ಈ ಯೋಜನೆಯಡಿ ಕೇಂದ್ರ ಸರ್ಕಾರ, ಒಬ್ಬ ರೈತರಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು ನೀಡಿದರೆ, ರಾಜ್ಯ ಸರ್ಕಾರ ಇದಕ್ಕೆ ಇನ್ನೂ ನಾಲ್ಕು ಸಾವಿರ ರೂಪಾಯಿ ಸೇರಿಸಿ ಒಟ್ಟು 10 ಸಾವಿರ ರೂಪಾಯಿಗಳನ್ನು ಪಾವತಿ ಮಾಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ಕೆಲವರು ದುರುಪಯೋಗಪಡಿಸಿಕೊಂಡಿರುವುದು ಕಂಡುಬಂದಿದೆ.

ತೆರಿಗೆ ಪಾವತಿಸುವ ಹಿಡುವಳಿದಾರರು ಮತ್ತು ಸಾಂಸ್ಥಿಕ ಭೂ ಹಿಡುವಳಿದಾರರು ಈ ಯೋಜನೆ ಅಡಿ ಹಣ ಪಡೆಯಲು ಅರ್ಹರಲ್ಲ. ಆದರೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದ ಕಾರಣ ಇದನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ 3.97 ಲಕ್ಷ ಅನರ್ಹರು ಈ ಯೋಜನೆ ಅಡಿ ಒಟ್ಟು 442 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಇದೀಗ ಹಣವನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅನರ್ಹರ ಪಟ್ಟಿಯನ್ನು ಬ್ಯಾಂಕುಗಳಿಗೆ ಕಳಿಸಿಕೊಡಲಾಗಿದ್ದು, ಹಣ ವಸೂಲಿ ಕಾರ್ಯ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...