alex Certify BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಇಬ್ಬರು ಆರೋಪಿಗಳು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ಇಬ್ಬರು ಆರೋಪಿಗಳು ನಾಪತ್ತೆ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿರುವ ನಡುವೆಯೇ ಇಬ್ಬರು ಆರೋಪಿಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಈಗಾಗಲೇ ಅಕ್ರಮದಲ್ಲಿ ಭಾಗಿಯಾಗಿ ಬಂಧನಕ್ಕೀಡಾಗಿರುವ ಮಂಜುನಾಥ್ ಮೇಳಕುಂದಿ ಸಹೋದರ ರವೀಂದ್ರ ಮೇಳಕುಂದಿ ಹಾಗೂ ಅಭ್ಯರ್ಥಿಯಾಗಿದ್ದ ಶಾಂತಾಬಾಯಿ ಇಬ್ಬರೂ ನಾಪತ್ತೆಯಾಗಿದ್ದು, ವಾರೆಂಟ್ ಜಾರಿಯಾದರೂ ಕಳೆದ ಒಂದುವರೆ ತಿಂಗಳಿಂದ ಶರಣಾಗದೇ ತಪ್ಪಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಶಾಂತಾಬಾಯಿ 40 ಲಕ್ಷ ರೂಪಾಯಿ ಹಣ ನೀಡಿ ಬ್ಲುಟೂಥ್ ಮೂಲಕ ಪರೀಕ್ಷಾ ಅಕ್ರಮ ನಡೆಸಿ ಪಿಎಸ್ಐ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಳು. ಇನ್ನು ರವೀಂದ್ರ ಮಧ್ಯವರ್ತಿಯಾಗಿದ್ದ ಎಂದು ತಿಳಿದುಬಂದಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...