alex Certify BIG NEWS: ಪಿಎಸ್ಐ ನೇಮಕಾತಿ ಅಕ್ರಮ; ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ತಿರಸ್ಕೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್ಐ ನೇಮಕಾತಿ ಅಕ್ರಮ; ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ತಿರಸ್ಕೃತ

ಕಲಬುರ್ಗಿ: 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಪಿಎಸ್ಐ ಹುದ್ದೆ ನೇಮಕಾತಿ ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ನಡುವೆ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಆಪ್ತರಾಗಿರುವ ಅಸ್ಲಂ ಮುಜಾವರ್ ಹಾಗೂ ಮುನಾಫ್ ಜಮಾದಾರ್ ಅವರನ್ನು ನಿನ್ನೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಇದೀಗ ದಿವ್ಯಾ ಹಾಗರಗಿ ಹಾಗೂ ಮಹಾಂತೇಶ್ ಪಾಟೀಲ್ ಸೇರಿದಂತೆ 8 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ 1ನೇ ಹೆಚ್ಚುವರಿ ಸೆಷನ್ ನ್ಯಾಯಾಲಯ ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...