alex Certify BIG NEWS: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ; ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದ ಕಿಂಗ್ ಪಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ; ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದ ಕಿಂಗ್ ಪಿನ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಪ್ರಕರಣದ ಕಿಂಗ್ ಪಿನ್ ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದಾನೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ರುದ್ರೇಗೌಡ ಪಾಟೀಲ್, ಕೋವಿಡ್ ನಿಂದ ಮೃತಪಟ್ಟ ನೌಕರ ಲಕ್ಷ್ಮಿಪುತ್ರ ಎಂಬುವವರ ಮೊಬೈಲ್ ನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದು, ಅದೇ ಮೊಬೈಲ್ ನಿಂದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ತಮ್ಮ ಮೊಬೈಲ್ ಬಳಸಿದರೆ ಸಿಕ್ಕಿ ಬೀಳುತ್ತೇವೆ ಎಂಬ ಕಾರಣಕ್ಕೆ ಆರೋಪಿಗಳು ಬೇರೆಯವರ ಮೊಬೈಲ್ ಬಳಸಿ ಅಕ್ರಮವೆಸಗಿದ್ದಾರೆ. ಡೀಲ್ ಮಾಡುವಾಗಲೇ ಬೇರೆಯವರ ಮೊಬೈಲ್ ತರಬೇಕು ಎಂದು ಕಿಂಗ್ ಪಿನ್ ಸೂಚಿಸುತ್ತಿದ್ದ. ಬಂಧಿತ ಗನ್ ಮ್ಯಾನ್ ಹಯ್ಯಾಳೆ ದೇಸಾಯಿ ತನ್ನ ಮೊಬೈಲ್ ಬಿಟ್ಟು ಸ್ನೇಹಿತ ಪೇದೆ ರುದ್ರಗೌಡ ಮೊಬೈಲ್ ತೆಗೆದುಕೊಂಡು ಹೋಗಿದ್ದ. ಮೊಬೈಲ್ ಕೊಟ್ಟಿದ್ದ ಶರಣಬಸಪ್ಪ, ರುದ್ರಗೌಡರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪಿಎಸ್ ಐ ಅಕ್ರಮ ಪ್ರಕರಣದಲ್ಲಿ ಈವರೆಗೆ ಒಟ್ಟು 15 ಆರೋಪಿಗಳನ್ನು ಸಿಐಡಿ ಬಂಧಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...