alex Certify BIG NEWS: ಪುತ್ರಶೋಕ ನಿರಂತರ; ದಿವಂಗತ ಮಗನ ವಿರುದ್ಧದ ಬಿಜೆಪಿ ಆರೋಪ ಅತ್ಯಂತ ಕ್ಷುಲ್ಲಕತನದ ರಾಜಕಾರಣ; ಬೇಸರ ಹಂಚಿಕೊಂಡ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ರಶೋಕ ನಿರಂತರ; ದಿವಂಗತ ಮಗನ ವಿರುದ್ಧದ ಬಿಜೆಪಿ ಆರೋಪ ಅತ್ಯಂತ ಕ್ಷುಲ್ಲಕತನದ ರಾಜಕಾರಣ; ಬೇಸರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ತಮ್ಮ ಭ್ರಷ್ಟಾಚಾರ ಮುಚ್ಚಿ ಹಾಕಲು ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಬಿಜೆಪಿ ಎಳೆದು ತಂದಿದೆ. ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ನ್ಯಾಯಾಧೀಶರಿಂದ ತನಿಖೆ ನಡೆಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಗಲಿ ಹೋದ ನನ್ನ ಮಗನ ಹೆಸರನ್ನು ಬಿಜೆಪಿ ಅನಗತ್ಯವಾಗಿ ಎಳೆದು ತಂದಿದೆ. ಸರಿ. ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಮಗ ರಾಕೇಶ್ ನಮ್ಮನ್ನು ಅಗಲಿ ಐದು ವರ್ಷಗಳಾಗಿವೆ. ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ಬಿಜೆಪಿ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು ಅತ್ಯಂತ ವೈಯಕ್ತಿಕ ಮತ್ತು ಕ್ಷುಲ್ಲಕತನದ ರಾಜಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಕೇಶ್ ಜೊತೆಗೆ ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಹಾಗಾದರೆ 2018ರಲ್ಲಿ ದಾವೂಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಫೋಟೋವನ್ನು ಹೇಗೆ ವ್ಯಾಖ್ಯಾನಿಸುವುದು? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...