alex Certify BIG NEWS: ಪೊಲೀಸರು ಬಿಜೆಪಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ….? ಎಲ್ಲದಕ್ಕೂ ನನ್ನ ಟಾರ್ಗೆಟ್ ಮಾಡುತ್ತಿರುವುದೇಕೆ…?; ಜಮೀರ್ ಅಹ್ಮದ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸರು ಬಿಜೆಪಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ….? ಎಲ್ಲದಕ್ಕೂ ನನ್ನ ಟಾರ್ಗೆಟ್ ಮಾಡುತ್ತಿರುವುದೇಕೆ…?; ಜಮೀರ್ ಅಹ್ಮದ್ ಆಕ್ರೋಶ

ಬೆಂಗಳೂರು: ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಶಾಸಕ ಜಮೀರ್ ಅಹ್ಮದ್ ವಿರುದ್ಧ ಆರೋಪ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಮೀರ್ ಅಹ್ಮದ್, ಬಿಜೆಪಿಯವರು ಏನೆ ನಡೆದರೂ ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ ಅವರಿಗೆ ಕನಸಿನಲ್ಲೂ ನಾನೇ ಬರುತ್ತಿದ್ದೇನೆ ಎಂದು ಕಿಡಿಕಾರಿದ್ದಾರೆ.

ರೇಖಾ ಕದಿರೇಶ್ ನನ್ನ ಸಹೋದರಿಯಂತೆ. ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದದ್ದು, ಪಾಲಿಕೆ ಮಾಜಿ ಸದಸ್ಯರೊಬ್ಬರಿಗೆ ರಕ್ಷಣೆ ನಿಡಲು ಸಾಧ್ಯವಾಗುತ್ತಿಲ್ಲ ಎನ್ನುವುದಾದರೆ ಇಂತಹ ಬಿಜೆಪಿ ಸರ್ಕಾರ ಯಾಕೆ ಇರಬೇಕು? ತಮ್ಮ ತಪ್ಪುಗಳನ್ನು ಮುಚ್ಚಿಡಲು ಅನಗತ್ಯ ಆರೋಪ ಮಾಡುತ್ತಿದ್ದಾರೆ. ಇಷ್ಟಕ್ಕು ಪೊಲೀಸರು ತನಿಖೆ ಕೈಗೊಳ್ಳುವ ಮೊದಲು ಬಿಜೆಪಿ ನಾಯಕರು ನನ್ನ ವಿರುದ್ಧ ಆರೋಪ ಮಾಡಲು ಪೊಲೀಸರು ಇವರಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ? ಬಿಜೆಪಿ ನಾಯಕರು ತನಿಖೆ ನಡೆಸಲು ಎಂದಿನಿಂದ ಆರಂಭಿಸಿದರು? ಎಂದು ಪ್ರಶ್ನಿಸಿದ್ದಾರೆ.

ಕದಿರೇಶ್ ಹತ್ಯೆ ನಡೆದಾಗಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಆದರೆ ಏನಾಯಿತು? ತನಿಖೆ ಬಳಿಕ ಸತ್ಯ ಹೊರಬಂತು. ಏನೇ ನಡೆದರೂ ಬಿಜೆಪಿ ನಾಯಕರಿಗೆ ನಾನೊಬ್ಬ ಕಾಣುತ್ತಿದ್ದೇನೆ. ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈಗಲೂ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣಕ್ಕು ನನಗೂ ಯಾವುದೇ ಸಂಬಂಧವಿಲ್ಲ. ಪೊಲೀಸರ ತನಿಖೆ ಬಳಿಕ ಸತ್ಯ ಗೊತ್ತಾಗಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...