alex Certify BIG NEWS : ‘ಪೊಲೀಸರು ಹಣೆಗೆ ತಿಲಕ ಇಡಬಾರದು ಅಂತ ನಾನು ಎಲ್ಲೂ ಹೇಳಿಲ್ಲ’ ; ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಪೊಲೀಸರು ಹಣೆಗೆ ತಿಲಕ ಇಡಬಾರದು ಅಂತ ನಾನು ಎಲ್ಲೂ ಹೇಳಿಲ್ಲ’ ; ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ಪೊಲೀಸರು ಹಣೆಗೆ ತಿಲಕ ಇಡಬಾರದು ಅಂತ ನಾನು ಎಲ್ಲೂ ಹೇಳಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G. Parameshwar) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಹಣೆ ಮೇಲೆ ಕುಂಕುಮ ಇಡಬಾರದು ಎಂದು ಎಲ್ಲೂ ಹೇಳಿಲ್ಲ, ಪೊಲೀಸರಿಗೆ ಯೂನಿಫಾರ್ಮ್ (Uniform) ಇರುತ್ತದೆ, ಅವರಿಗೆ ತನ್ನದೇ ಆದ ನಿಯಮ ಇರುತ್ತದೆ. ಆ ನಿಯಮಗಳ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಬಹುದು. ಸುಮ್ಮನೆ ಗೊಂದಲ ಸೃಷ್ಟಿಸಬೇಡಿ. ಬೊಟ್ಟು, ವಿಭೂತಿ ಏನೂ ಬೇಕಾದರೂ ಇಟ್ಟುಕೊಳ್ಳಬಹುದು ಎಂದರು.

ಕರಾವಳಿ ಭಾಗ ಸೇರಿದಂತೆ ರಾಜ್ಯದ ಕೆಲವು ಕಡೆ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ. ಆಗಸ್ಟ್ 15 ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ (Drug free) ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...