ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಧರಣಿ ನಿರತ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಭಿಷೇಕ್ (23) ಮೃತ ವಿದ್ಯಾರ್ಥಿ. ಪ್ರತಿಭಟನೆಯ ವೇಳೆ ಏಕಾಏಕಿ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಸಾವಿಗೆ ವಿಶ್ವವಿದ್ಯಾಲಯದ ನಿರ್ಲಕ್ಷವೇ ಕಾರಣ ಎಂದು ಉಳಿದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 12 ದಿನಗಳಿಂದ ವಿದ್ಯಾರ್ಥಿಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗದ ಆಡಳಿತ ಮಂಡಳಿ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಈ ವೇಳೆ ಕುಸಿದುಬಿದ್ದು ವಿದ್ಯಾರ್ಥಿ ಅಭಿಷೇಕ್ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ಸಾವು ಖಂಡಿಸಿರುವ ವಿದ್ಯಾರ್ಥಿಗಳು ವಿವಿ ವಿರುದ್ಧ ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸಿದ್ದಾರೆ.