alex Certify BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಬಂಧಿತ ಪ್ರಮುಖ ಆರೋಪಿಗಳು ಬೆಳ್ಳಾರೆ ಸ್ಥಳೀಯರು; ಮಹತ್ವದ ಮಾಹಿತಿ ನೀಡಿದ ADGP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಬಂಧಿತ ಪ್ರಮುಖ ಆರೋಪಿಗಳು ಬೆಳ್ಳಾರೆ ಸ್ಥಳೀಯರು; ಮಹತ್ವದ ಮಾಹಿತಿ ನೀಡಿದ ADGP

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಕೇಸ್ ನಲ್ಲಿ ಇಂದು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳೆಲ್ಲರೂ ಬೆಳ್ಳಾರೆ ಅಕ್ಕಪಕ್ಕದವರೇ ಆಗಿದ್ದಾರೆ. ಸ್ಥಳೀಯರಾಗಿದ್ದೇ ಹತ್ಯೆ ಮಾಡಿರುವ ಬಗ್ಗೆ ಶಂಕೆಯಿದೆ. ಹತ್ಯೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ಹತ್ಯೆ ಹಿಂದೆ ಎಸ್ ಡಿ ಪಿ ಐ, ಪಿ ಎಫ್ ಐ ಭಾಗಿ ಬಗ್ಗೆ ನಮಗೆ ಅನುಮಾನಗಳಿವೆ. ಈ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...