alex Certify BIG NEWS: ಪ್ರಿನ್ಸಿಪಾಲರು ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಿನ್ಸಿಪಾಲರು ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಪಿಯು ವಿದ್ಯಾರ್ಥಿನಿಯೋರ್ವಳು ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಮನೆಯಲ್ಲಿ ಈ ದುರಂತ ಸಂಭವಿಸಿದ್ದು, ದೀಪ್ತಿ ಮೃತ ವಿದ್ಯಾರ್ಥಿನಿ. ದೀಪ್ತಿ ಹೆಬ್ರಿಯ ಎಸ್.ಆರ್. ಪಿಯು ಕಾಲೇಜ್ ವಿದ್ಯಾರ್ಥಿನಿ.

ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ದೀಪ್ತಿಯನ್ನು ಕರೆದು ಪ್ರಾಂಶುಪಾಲರು ಬೈದಿದ್ದರಂತೆ. ಕೇವಲ 10 ಅಂಕ ಕಡಿಮೆ ಬಂದಿದ್ದಕ್ಕೆ ಸಹಪಾಠಿಗಳ ಎದುರು ನಿಲ್ಲಿಸಿ ಪ್ರಾಂಶುಪಾಲರು ಬೈದಿದ್ದರಂತೆ ದಂಡ ಹಾಕುವುದಾಗಿಯೂ ಹೇಳಿದ್ದರಂತೆ. ಇದರಿಂದ ಮನನೊಂದು ಮಗಳು ದೀಪ್ತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ದೀಪ್ತಿ ಪೋಷಕರು ಆರೋಪಿಸಿದ್ದಾರೆ.

ಪ್ರಿನ್ಸಿಪಾಲರ ವಿರುದ್ಧ ದೀಪ್ತಿ ತಂದೆ ಸುರೇಶ್ ಮೆಂಡನ್ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...