alex Certify BIG NEWS: ಫೈಟರ್ ರವಿ ಬಿಜೆಪಿ ಸೇರಿದ್ದಾರೆ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫೈಟರ್ ರವಿ ಬಿಜೆಪಿ ಸೇರಿದ್ದಾರೆ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು: ರೌಡಿಶೀಟರ್ ಗಳು ಬಿಜೆಪಿ ಸೇರ್ಪಡೆ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ನಡುವೆ ಫೈಟರ್ ರವಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ಫೈಟರ್ ರವಿ ಬಿಜೆಪಿಗೆ ಸೇರಿದ್ದಾರೆ. ಆದರೆ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಸೈಲೆಂಟ್ ಸುನೀಲ್ ಸಾಮಾಜಿಕ ಕಾರ್ಯಕ್ರಮ ಮಾಡಿದ್ದಾನೆ. ಕಾರ್ಯಕ್ರಮದಲ್ಲಿ ಕೆಲ ಬಿಜೆಪಿ ನಾಯಕರು ಭಾಗಿಯಾಗಿದ್ದರು. ಹಾಗಂತ ಕಾರ್ಯಕ್ರಮಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೆಳಿದ್ದಾರೆ.

ನಿನ್ನೆಯಷ್ಟೇ ಸೈಲೆಂಟ್ ಸುನೀಲ್ ಪರ ಸಮರ್ಥನೆ ಮಾಡಿಕೊಂಡಿದ್ದ ಸಚಿವ ಅಶ್ವತ್ಥನಾರಾಯಣ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಸೈಲೆಂಟ್ ಸುನೀಲ್ ನನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದರು. ಇದರ ಬೆನ್ನಲ್ಲೇ ಸಚಿವರು ಬಿಜೆಪಿ ಕಾನೂನನ್ನು ಗೌರವಿಸುತ್ತದೆ, ಕಾನೂನನ್ನು ಪಾಲಿಸುತ್ತದೆ. ಯಾರನ್ನೋ ಸಮರ್ಥಿಸಿಕೊಳ್ಳುವುದಕ್ಕೆ ನಾನು ವಕ್ತಾರನಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...