alex Certify BIG NEWS: ಬಂಗಾಳದಲ್ಲಿ ಮುಂದುವರೆದ ರಾಜಕೀಯ ದ್ವೇಷ; ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಗಾಳದಲ್ಲಿ ಮುಂದುವರೆದ ರಾಜಕೀಯ ದ್ವೇಷ; ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಕೋಲ್ಕತ್ತಾ: ಚುನಾವಣೆ ಮುಗಿದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ – ಬಿಜೆಪಿ ನಡುವಿನ ರಾಜಕೀಯ ದ್ವೇಷ ಮುಂದುವರೆದಿದೆ. ಬಿಜೆಪಿ ಕಾರ್ಯಕರ್ತನೋರ್ವನನ್ನು ಟಿಎಂಸಿ ಕಾರ್ಯಕರ್ತರು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ; 1.68 ಕೋಟಿ ಡೋಸ್ ಲಸಿಕೆ ನೀಡಿಕೆ

ಬಿಜೆಪಿಯ ಖೈರಶೋಲ್ ಗ್ರಾಮೀಣ ಮಂಡಳಿಯ ಸಹ ಅಧ್ಯಕ್ಷ ಮಿಥುನ್ ಬಾಘ್ರಿ ಹತ್ಯೆಗೀಡಾದ ಕಾರ್ಯಕರ್ತ. ಬಿರ್ಭುಮ್ ನಲ್ಲಿ ಮಿಥುನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ತಿಮಿಂಗಿಲದ ಬಾಯೊಳಗೆ ಹೋಗಿಯೂ ಬದುಕಿ ಬಂದ ʼಡೈವರ್‌ʼ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಬಳಿಕ ಟಿಎಂಸಿ ಕಾರ್ಯಕರ್ತರ ದಾಳಿಯಿಂದಾಗಿ 37 ಬಿಜೆಪಿ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಕಳೆದ ವಾರ ಆರೋಪಿಸಿದ್ದರು. ಈ ಬೆಳವಣಿಗೆ ನಡುವೆ ಇದೀಗ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...