alex Certify BIG NEWS: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ; ಕಣ್ಣೂರುಶ್ರೀ, ಯುವತಿ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ; ಕಣ್ಣೂರುಶ್ರೀ, ಯುವತಿ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಣ್ಣೂರು ಮಠದ ಸ್ವಾಮೀಜಿ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೆಮಠದ ಶ್ರೀಗಳಿಗೆ ಹನಿಟ್ರ್ಯಾಪ್ ಮಾಡಿದ್ದ ಕಣ್ಣೂರು ಮಠದ ಡಾ.ಮೃತ್ಯುಂಜಯ ಸ್ವಾಮೀಜಿ, ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕಾ ಹಾಗೂ ಕಣ್ಣೂರು ಮಠದ ವಕೀಲ ಮಹದೇವಯ್ಯ ಅವರನ್ನು ಮಾಗಡಿ ಪೊಲೀಸರು ಇಂದು ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...