alex Certify BIG NEWS: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಕೇಸ್; ಮತ್ತೊಂದು ಡೆತ್ ನೋಟ್ ಬಗ್ಗೆ ಮಾಹಿತಿ ನೀಡಿದ ಎಸ್ ಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಕೇಸ್; ಮತ್ತೊಂದು ಡೆತ್ ನೋಟ್ ಬಗ್ಗೆ ಮಾಹಿತಿ ನೀಡಿದ ಎಸ್ ಪಿ

ರಾಮನಗರ: ಬಂಡೆಮಠದ ಬಸವಲಿಂಗಶ್ರೀಗಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಡೆತ್ ನೋಟ್, ವಿಡಿಯೋ ಸೇರಿದಂತೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಮನಗರ ಎಸ್ ಪಿ ಸಂತೋಷ್ ಬಾಬು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಇನ್ನೊಂದು ಡೆತ್ ನೋಟ್ ಇದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ತನಿಖೆಗೆ ಇನ್ಸ್ ಪೆಕ್ಟರ್ ಗೆ ಸೂಚಿಸಿದ್ದೇನೆ. ಒಟ್ಟು 6 ಪುಟಗಳ ಡೆತ್ ನೋಟ್ ನಲ್ಲಿ ನಮಗೆ ಈವರೆಗೆ 3 ಪುಟಗಳ ನೋಟ್ ಸಿಕ್ಕಿದೆ. ಮಠದ ಸಿಬ್ಬಂದಿಗಳ ಕೈಲಿ ಇನ್ನಷ್ಟು ಡೆತ್ ನೋಟ್ ಪುಟಗಳು ಇವೆ. ಎಲ್ಲಾ ಪುಟಗಳನ್ನು ಸಂಗ್ರಹಿಸಲಾಗುವುದು ಎಂದರು.

ಪ್ರಕರಣದ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈವರೆಗಿನ ವಿಚಾರಣೆಯಲ್ಲಿ ಲೇಡಿ ಬಗ್ಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ತನಿಖೆ ಚುರುಕುಗೊಳಿಸಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...