alex Certify BIG NEWS: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ.

ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಈ ನಡುವೆ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಮೊಬೈಲ್ ಪರಿಶೀಲನೆ ನಡೆಸಿದಾಗ ನೀಲಾಂಬಿಕೆಗೆ ಮೊಬೈಲ್ ಬಗ್ಗೆ ಅಪಾರ ಜ್ಞಾನವಿರುವುದು ಗೊತ್ತಾಗಿದೆ. ಅಲ್ಲದೇ 6 ತಿಂಗಳ ಮೊಬೈಲ್ ಡೇಟಾವನ್ನು ಸಂಪೂರ್ಣವಾಗಿ ಡಿಲಿಟ್ ಮಾಡಿರುವ ನೀಲಾಂಬಿಕೆ ಕೆಲ ತಿಂಗಳಿಂದ ಮೊಬೈಲ್ ಉಪಯೋಗಿಸುತ್ತಿರುವುದರ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...