alex Certify BIG NEWS: ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಡೆತ್ ನೋಟ್ ನಲ್ಲಿ ಪ್ರಭಾವಿ ನಾಯಕನ ಹೆಸರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಡೆತ್ ನೋಟ್ ನಲ್ಲಿ ಪ್ರಭಾವಿ ನಾಯಕನ ಹೆಸರು…!

ಬಂಡೆ ಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಮತ್ತಷ್ಟು ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ.

ಬಸವಲಿಂಗ ಶ್ರೀಗಳು ತಮ್ಮ ಡೆತ್ ನೋಟ್ ನಲ್ಲಿ ಪ್ರಭಾವಿ ನಾಯಕರೊಬ್ಬರ ಹೆಸರನ್ನು ಬರೆದಿದ್ದಾರೆ ಎಂದು ಹೇಳಲಾಗಿದ್ದು, ಹೀಗಾಗಿ ಅವರನ್ನು ಕರೆಯಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಜೊತೆಗೆ ಇಬ್ಬರು ಸ್ವಾಮೀಜಿಗಳು ಎಂದು ಪತ್ರದಲ್ಲಿ ಉಲ್ಲೇಖ ಮಾಡಿರುವ ಕಾರಣ ಈಗ ಬಂಧನಕ್ಕೊಳಗಾಗಿರುವ ಮೃತ್ಯುಂಜಯ ಸ್ವಾಮಿ ಜೊತೆಗೆ ಶಾಮೀಲಾಗಿದ್ದ ಮತ್ತೊಬ್ಬ ಸ್ವಾಮೀಜಿ ಯಾರು ಎಂಬ ಪ್ರಶ್ನೆ ಮೂಡಿದೆ.

ಬಸವಲಿಂಗ ಶ್ರೀಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ನಿತ್ಯವೂ ಮೆಸೇಜ್ ಕಳುಹಿಸುತ್ತಿದ್ದಳು ಎನ್ನಲಾಗಿದ್ದು, ಅಲ್ಲದೆ ಆಡಿಯೋ, ವಿಡಿಯೋ ಕಾಲ್ ಗಳು ಸಹ ಈಕೆಯ ಮೊಬೈಲ್ನಲ್ಲಿ ಇತ್ತು ಎಂದು ಹೇಳಲಾಗಿದೆ. ಸ್ವಾಮೀಜಿ ಆತ್ಮಹತ್ಯೆಗೆ ಶರಣಾದ ಬಳಿಕ ಈಕೆ ತನ್ನ ಮೊಬೈಲ್ ಅನ್ನು ಎಸೆದಿದ್ದಳು ಎಂಬ ಸಂಗತಿ ಈಗ ಬಹಿರಂಗವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...