alex Certify BIG NEWS: ಬಕ್ರೀದ್ ಹಿನ್ನೆಲೆ; ತಲೆಗೆ ಟೋಪಿ ಧರಿಸಿ ಮುಸ್ಲಿಂ ಬಾಂಧವರೊಂದಿಗೆ ಪ್ರಾರ್ಥನೆ ಸಲ್ಲಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಕ್ರೀದ್ ಹಿನ್ನೆಲೆ; ತಲೆಗೆ ಟೋಪಿ ಧರಿಸಿ ಮುಸ್ಲಿಂ ಬಾಂಧವರೊಂದಿಗೆ ಪ್ರಾರ್ಥನೆ ಸಲ್ಲಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಇಂದು ಬಕ್ರೀದ್ ಆಚರಣೆ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಭಾಗಿಯಾಗಿದ್ದು ವಿಶೇಷವಾಗಿತ್ತು.

ತಲೆಗೆ ಟೋಪಿ ಹಾಕಿ, ಕಪ್ಪು ಶಾಲು ಧರಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಸ್ಲಿಂ ಬಾಂಧವರೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಅಲ್ಲಾಹು ಪ್ರಾರ್ಥನೆ ಮಾಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಎಲ್ಲರೂ ಪ್ರೀತಿ-ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ದೇಶದಲ್ಲಿ ಶಾಂತಿ ಕಾಪಾಡುವಂತೆ ನಾನೂ ಕೂಡ ಅಲ್ಲಾಹುವಿನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಚಾಮರಾಜಪೇಟೆಯಲ್ಲಿನ ಮಲೈಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಸಿದ್ದರಾಮಯ್ಯ ಅವರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಸಾಥ್ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...