alex Certify BIG NEWS: ಬಳ್ಳಾರಿ ವಿಮ್ಸ್ ನಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ ವಿಮ್ಸ್ ನಿರ್ದೇಶಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಳ್ಳಾರಿ ವಿಮ್ಸ್ ನಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ ವಿಮ್ಸ್ ನಿರ್ದೇಶಕ

ಬಳ್ಳಾರಿ: ಬಳ್ಳಾರಿ ವಿಮ್ಸ್ ನಲ್ಲಿ ಮೂವರು ರೋಗಿಗಳ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕರ ಮೇಲಿನ ಸೇಡಿಗೆ ಬಡ ರೋಗಿಗಳನ್ನೇ ಬಲಿ ಪಡೆದರೇ ಎಂಬ ಅನುಮಾನ ವ್ಯಕ್ತವಾಗಿದೆ.

ವಿಮ್ಸ್ ನಿರ್ದೇಶಕರನ್ನು ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ಷಡ್ಯಂತ್ರ ನಡೆದಿರುವ ಆರೋಪ ಕೇಳಿಬಂದಿದ್ದು, ಇದೇ ಕಾರಣಕ್ಕೆ ವಿಮ್ಸ್ ನಲ್ಲಿ ಕರೆಂಟ್ ಕಟ್ ಮಾಡಿ ಸೇಡು ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಸ್ವತಃ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಆರೋಪಿಸಿದ್ದು, ತನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದು, ನನ್ನ ಹೆಸರು ಕೆಡಿಸಲು ವಿದ್ಯುತ್ ಸಂಪರ್ಕ ಕಡಿತ ಮಾಡಿ ರೋಗಿಗಳ ಸಾವಿಗೆ ಕಾರಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕರೆಂಟ್ ಹೋದ ಬಳಿಕ ಕೆಲವರು ಕರೆ ಮಾಡಿ ಹೇಳಿದ್ದಾರೆ. ಮಾತನಾಡಿರುವ ಕೆಲ ಆಡಿಯೋಗಳಿದ್ದು, ಆ ಆಡಿಯೋ ಸಂಗ್ರಹ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...